ಬಸವ ನೆಲೆಗಳ ಸಮಗ್ರಅಭಿವೃದ್ಧಿಗೆ ಬಸವ ಸಂಗಮ ಯೋಜನೆ
ಬೆಂಗಳೂರು : ಬಸವ ಕಲ್ಯಾಣ, ಕೂಡಲ ಸಂಗಮ ಹಾಗೂ ಚಿಕ್ಕ ಸಂಗಮ ಮತ್ತು ಬಸವನ ಬಾಗೇವಾಡಿ ಪ್ರದೇಶಗಳ ಸಮಗ್ರ ಅಭಿವೃದ್ಧಿ ಕಾರ್ಯವನ್ನು ಬಸವ ಸಂಗಮ ಅಭಿವೃದ್ಧಿ ಯೋಜನೆಯಡಿ ಕೈಗೆತ್ತಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ತಿಳಿಸಿದ್ದಾರೆ.
ಬಸವ ಜಯಂತಿ ಪ್ರಯುಕ್ತ ಗುರುವಾರ ಬಸವ ವೇದಿಕೆ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಜಾತಿ ಜಾತಿ ಎಂದು ಕಚ್ಚಾಡದೆ ಒಂದಾಗಿ, ಮೌಢ್ಯತೆಯಿಂದ ಹೊರಬನ್ನಿ ಎಂಬ ತತ್ತ್ವಗಳನ್ನು 800 ವರ್ಷಗಳ ಹಿಂದೆಯೇ ಪ್ರತಿಪಾದಿಸಿದ್ದ ದೊಡ್ಡ ವ್ಯಕ್ತಿ ಬಸವಣ್ಣ. ಅವರ ವಚನಗಳು ಅಂತರಂಗ ಶುದ್ಧಿ ಮಾಡುವಂಥವು. ಇಂಥಾ ಮಹಾನ್ ವ್ಯಕ್ತಿಯ ಬಗ್ಗೆ ಸರ್ಕಾರ ಪೂರ್ಣ ನಂಬುಗೆ ಇರಿಸಿರುವುದರಿಂದಲೇ ಬಸವ ಪುರಸ್ಕಾರ ನೀಡಲು ನಿರ್ಧರಿಸಿರುವುದು ಎಂದು ಕೃಷ್ಣ ಹೇಳಿದರು.
ಪುಟವಿಟ್ಟ ಬಂಗಾರ : ಇದಕ್ಕೂ ಮುನ್ನ ಶಿಕ್ಷಣ ತಜ್ಞ ಎಚ್.ನರಸಿಂಹಯ್ಯ ಅವರಿಗೆ ಮುಖ್ಯಮಂತ್ರಿ ಕೃಷ್ಣ ಬಸವ ಶ್ರೀ ಪ್ರಶಸ್ತಿ ಪ್ರದಾನ ಮಾಡಿದರು. ಗ್ರಂಥಪಾಲಕ ಹಾಗೂ ಸಂಶೋಧಕ ಡಾ.ಎಸ್.ಆರ್.ಗುಂಜಾಳ್ ಅವರಿಗೆ ಸಾಹಿತ್ಯ ಶ್ರೀ ಪ್ರಶಸ್ತಿ ಪ್ರದಾನ ಮಾಡಿದ ಕೆಪಿಸಿಸಿ ಅಧ್ಯಕ್ಷ ಹಾಗೂ ತೋಟಗಾರಿಕಾ ಸಚಿವ ಅಲ್ಲಂ ವೀರಭದ್ರಪ್ಪ, ರಾಜ್ಯಾಂಗದಲ್ಲಿ ಯಾವ ತಿದ್ದುಪಡಿ ಬೇಕಾದರೂ ಮಾಡಬಹುದು. ಆದರೆ ಪುಟವಿಟ್ಟ ಬಂಗಾರದಂತಿರುವ ಬಸವಣ್ಣನವರ ವಚನಗಳ ಒಂದೇ ಒಂದು ಪದವನ್ನೂ ಬದಲಿಸುವ ಪ್ರಮೇಯ ಈವರೆಗೆ ಬಂದಿಲ್ಲ ಅಂದರು. ಇದೇ ಸಂದರ್ಭದಲ್ಲಿ ಅವರು ಬಸವೇಶ್ವರರ ಭಾವಚಿತ್ರ ಅನಾವರಣ ಮಾಡಿದರು.
ವಿಶೇಷ ಸಂಚಿಕೆ ಬಿಡುಗಡೆ : ಸಮಾರಂಭದ ವಿಶೇಷ ಸಂಚಿಕೆ ಬಿಡುಗಡೆ ಮಾಡಿ ಮಾತಾಡಿದ ಸಹಕಾರ ಸಚಿವ ಡಿ.ಕೆ.ಶಿವಕುಮಾರ್, ಬಸವ ಕ್ಷೇತ್ರಗಳ ಅಭಿವೃದ್ಧಿಗೆ ಜೆ.ಎಚ್.ಪಟೇಲರು ಪ್ರಾರಂಭಿಸಿದ ಯೋಜನೆಯನ್ನು ನಮ್ಮ ಸರ್ಕಾರ ಮುಂದುವರೆಸಲಿದೆ ಎಂದರು. ಪ್ರಶಸ್ತಿಗೆ ಭಾಜನರಾದ ಎಚ್ಚೆನ್ ಹಾಗೂ ಗುಂಜಾಳ್, ತಮಗಿತ್ತಿರುವ ಪುರಸ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.
ಸಿದ್ಧಗಂಗಾ ಮಠಾಧ್ಯಕ್ಷ ಡಾ. ಶಿವಕುಮಾರ ಸ್ವಾಮಿ ಸಮಾರಂಭದ ಸಾನ್ನಿಧ್ಯ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಎಂ.ವಿ.ರಾಜಶೇಖರ್ ಅವರಿಗೆ ಅಧ್ಯಕ್ಷ ಗೌರವ ನೀಡಲಾಗಿತ್ತು. ಉಪ ಮೇಯರ್ ಬಿ.ಎಸ್.ಪುಟ್ಟರಾಜು, ಶಾಸಕರಾದ ಬಸವರಾಜ ಬೊಮ್ಮಾಯಿ, ವಿ.ಸೋಮಣ್ಣ ಮೊದಲಾದವರು ಸಮಾರಂಭದಲ್ಲಿ ಹಾಜರಿದ್ದರು.
ಈ ಕಾರ್ಯಕ್ರಮಕ್ಕೆ ಮುನ್ನ ನಗರದ ಬಸವೇಶ್ವರ ವೃತ್ತದಲ್ಲಿರುವ ಅಶ್ವಾರೂಢ ಬಸವೇಶ್ವರರ ಪ್ರತಿಮೆಗೆ ಮುಖ್ಯಮಂತ್ರಿ ಕೃಷ್ಣ ಬೃಹತ್ ಮಾಲೆಯನ್ನು ಅರ್ಪಿಸಿದರು. ಅಲ್ಲಿಯೂ ಬಸವಣ್ಣನವರ ಅಪ್ರತಿಮ ವ್ಯಕ್ತಿತ್ವವನ್ನು ಕೃಷ್ಣ ಕೊಂಡಾಡಿದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications