ಚುನಾವಣೆ ಪ್ರಚಾರಕ್ಕೆ ತಮಿಳುನಾಡು, ಕೇರಳದಿಂದ ಕೃಷ್ಣರಿಗೆ ಬುಲಾವ್
ಬೆಂಗಳೂರು : ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಾ ಕರ್ನಾಟಕದ ಕೀರ್ತಿಯನ್ನು ವಿಶ್ವಾದ್ಯಂತ ಹಬ್ಬಿಸುತ್ತಿರುವ ಮುಖ್ಯಮಂತ್ರಿ ಕೃಷ್ಣ ಅವರ ತಾರಾಮೌಲ್ಯ ಏರಿದೆ. ಎಸ್.ಎಂ. ಕೃಷ್ಣ ಅವರಿಗೆ ಕರ್ನಾಟಕದಲ್ಲಷ್ಟೇ ಅಲ್ಲ ಹೊರ ರಾಜ್ಯ - ಹೊರ ರಾಷ್ಟ್ರಗಳಲ್ಲೂ ಅಭಿಮಾನಿಗಳಿದ್ದಾರೆ. ಕಾಂಗ್ರೆಸ್ ಪಕ್ಷ ಕೃಷ್ಣರನ್ನು ಒಬ್ಬ ರಾಷ್ಟ್ರೀಯ ನಾಯಕ ಎಂದು ಗುರುತಿಸಿದೆ.
ಈ ಹಿನ್ನೆಲೆಯಲ್ಲಿ ತಮಿಳುನಾಡಿನ ಕಾಂಗ್ರೆಸ್ ಅಧ್ಯಕ್ಷ ಇಳಂಗೋವನ್ ಅವರು ಬುಧವಾರ ಕೃಷ್ಣ ಅವರನ್ನು ಭೇಟಿ ಮಾಡಿ, ತಮಿಳುನಾಡಿಗೆ ಆಗಮಿಸಿ ಪಕ್ಷದ ಪರ ಪ್ರಚಾರ ಮಾಡುವಂತೆ ಕೋರಿದ್ದಾರೆ. ಕೃಷ್ಣರ ಅಧಿಕೃತ ನಿವಾಸ ಅನುಗ್ರಹದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಇಳಂಗೋವನ್ ಕರ್ನಾಟಕದ ಗಡಿ ಭಾಗಗಳಲ್ಲಿ ಪ್ರವಾಸ ಕೈಗೊಂಡು ಕಾಂಗ್ರೆಸ್ ಪರ ಪ್ರಚಾರ ಮಾಡುವಂತೆ ಪ್ರಾರ್ಥಿಸಿದರು. ಕೇರಳ ಹಾಗೂ ಪಾಂಡಿಚೇರಿಯ ಕಾಂಗ್ರೆಸ್ ಅಧ್ಯಕ್ಷರಿಂದಲೂ ಕೂಡ ಕೃಷ್ಣ ಅವರಿಗೆ ಕೋರಿಕೆ ಬಂದಿದೆ.
ಈ ಮೂರೂ ರಾಜ್ಯಗಳ ಕಾಂಗ್ರೆಸ್ ನಾಯಕರ ಕೋರಿಕೆಯನ್ನು ಮನ್ನಿಸಿರುವ ಕೃಷ್ಣ , ಪಾಂಡಿಚೇರಿ, ಕೇರಳ ಹಾಗೂ ತಮಿಳುನಾಡಿನ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಪ್ರವಾಸ ಕೈಗೊಳ್ಳಲು ನಿರ್ಧರಿಸಿದ್ದಾರೆ. ಕೇರಳದಲ್ಲಿ ನಾಲ್ಕು ದಿನ ಪ್ರಚಾರ ಕಾರ್ಯ ಕೈಗೊಳ್ಳುವುದಾಗಿ ಸ್ವತಃ ಕೃಷ್ಣ ಅವರೇ ತಿಳಿಸಿದ್ದಾರೆ. ಆದರೆ, ಪ್ರಚಾರಕ್ಕೆ ದಿನಾಂಕ ಇನ್ನೂ ನಿಗದಿಯಾಗಿಲ್ಲ.
ಇಲ್ಲಿ ನಡೆದ ಸಮಾರಂಭವೊಂದರ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಔಪಚಾರಿಕವಾಗಿ ಮಾತನಾಡುತ್ತಾ ಮುಖ್ಯಮಂತ್ರಿ ಈ ವಿಷಯ ತಿಳಿಸಿದರು. ಜಯಲಲಿತಾ ಅವರ ನಾಮಪತ್ರ ತಿರಸ್ಕೃತವಾಗಿರುವುದು ಎಐಡಿಎಂಕೆ ಹಾಗೂ ಕಾಂಗ್ರೆಸ್ನ ಚುನಾವಣೆ ಹೊಂದಾಣಿಕೆಯ ಮೇಲೆ ಪರಿಣಾಮಬೀರದು ಎಂದೂ ಹೇಳಿದರು.
ಕುಮಾರಿ ಜಯಲಲಿತಾ ಅವರ ನಾಮಪತ್ರ ತಿರಸ್ಕೃತವಾಗಿರುವುದರಿಂದ ತಮಿಳುನಾಡು ಕಾಂಗ್ರೆಸ್ ಪಕ್ಷದ ಮೇಲಾಗಲೀ ಅಥವಾ ವಿಧಾನಸಭಾ ಚುನಾವಣೆಯ ಫಲಿತಾಂಶದ ಮೇಲಾಗಲೀ ಯಾವುದೇ ಪ್ರತಿಕೂಲ ಪರಿಣಾಮಬೀರದು ಎಂದೂ ಕೃಷ್ಣ ಹೇಳಿದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications