ತಿಂಗಳೊಳಗೆ ಮಾಹಿತಿ ತಂತ್ರಜ್ಞಾನಕಾರ್ಯಪಡೆ ಸಿದ್ಧ - ಮಹಾಜನ್
ನವದೆಹಲಿ : ಮಾಹಿತಿ ತಂತ್ರಜ್ಞಾನವನ್ನು ಸಾಮಾನ್ಯ ಮನುಷ್ಯನಿಗೂ ತಲುಪಿಸಲು ಸರಕಾರವು ‘ಮಾಹಿತಿ ತಂತ್ರಜ್ಞಾನ ಕಾರ್ಯಪಡೆ’ ಯನ್ನು ಅತಿ ಶೀಘ್ರದಲ್ಲಿಯೇ ಆರಂಭಿಸುವುದು ಎಂದು ಕೇಂದ್ರ ಮಾಹಿತಿತಂತ್ರಜ್ಞಾನ ಖಾತೆ ಸಚಿವ ಪ್ರಮೋದ್ ಮಹಾಜನ್ ಹೇಳಿದ್ದಾರೆ.
ಇನ್ನು ಒಂದು ತಿಂಗಳೊಳಗೆ ಐಟಿ ಕಾರ್ಯಪಡೆ ಸಿದ್ಧವಾಗಲಿದೆ ಎಂದು ಅವರು ಗುರುವಾರ ರಾಜ್ಯ ಸಭೆಯಲ್ಲಿ ಕಾಂಗ್ರೆಸ್ನ ಅಂಬಿಕಾ ಸೋನಿ ಅವರಿಗೆ ತಿಳಿಸಿದರು. ವಿತ್ತ ಸಚಿವ ಯಶವಂತ ಸಿನ್ಹ ಅವರ ನೇತೃತ್ವದಲ್ಲಿ ಐಟಿ ಮತ್ತು ಟೆಲಿಕಾಂ ಸಚಿವರುಗಳ ಗುಂಪು ಕೆಲಸ ಮಾಡುತ್ತಿದೆ. ಖಾಸಗಿಯವರು ಗ್ರಾಮೀಣ ಪ್ರದೇಶದವರಿಗೂ ಟೆಲಿಕಾಂ ಸಂಪರ್ಕಗಳನ್ನು ಒದಗಿಸಲು ಸಹಾಯವಾಗುವಂತೆ ಕಡ್ಡಾಯ ನೀತಿಯಾಂದನ್ನು ರೂಪಿಸಲಾಗುವುದು ಎಂದರು.
ದಕ್ಷಿಣ ಭಾರತ ರಾಜ್ಯಗಳಿಂದ ಮಾಹಿತಿ ತಂತ್ರಜ್ಞಾನ ಸಂಪನ್ಮೂಲಗಳನ್ನು ಉಪಯೋಗಿಸಿಕೊಂಡು ಉತ್ತರ ಭಾರತ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಐಟಿಯನ್ನು ಪಸರಿಸುವ ಮೂಲಕ ಭಾರತವನ್ನು ಐಟಿ ಸುಪರ್ ಪವರ್ ದೇಶವನ್ನಾಗಿ ಮಾಡಬಹುದು ಎಂದು ಮಹಾಜನ್ ಹೇಳಿದರು. ಪ್ರಸ್ತುತ 220 ಕೋಟಿ ರೂಪಾಯಿ ವೆಚ್ಚದಲ್ಲಿ ಸಮುದಾಯ ಮಾಹಿತಿ ಕೇಂದ್ರಗಳನ್ನು ಈಶಾನ್ಯ ರಾಜ್ಯಗಳಲ್ಲಿ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಅವರು ವಿವರಿಸಿದರು.
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications