ಮಾಹಿತಿ ತಂತ್ರಜ್ಞಾನದಲ್ಲಿ ಕರ್ನಾಟಕ ಈಗಲೂ ನಂ.1 : ಎಸ್.ಎಂ. ಕೃಷ್ಣ
ಬೆಂಗಳೂರು : ವಾರದಲ್ಲಿ ಕನಿಷ್ಠ ಒಂದು ವಿದೇಶೀ ಬಂಡವಾಳ ಹೊಂದಿರುವ ಕಂಪನಿಗಳು ರಾಜ್ಯದಲ್ಲಿ ಮಾಹಿತಿ ತಂತ್ರಜ್ಞಾನ ಉದ್ಯಮ ಸ್ಥಾಪಿಸಲು ನೊಂದಣಿ ಮಾಡುತ್ತಿದ್ದು, ಐ.ಟಿ. ಕ್ಷೇತ್ರದಲ್ಲಿ ಈಗಲೂ ರಾಜ್ಯ ನಂ.1 ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಕೃಷ್ಣ ಹೇಳಿದ್ದಾರೆ.
ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಬಂಡವಾಳ ಹೂಡಲು ಕರ್ನಾಟಕ ಒಂದು ಗೌರವಯುತ ರಾಜ್ಯ ಎಂದು ಬಹುರಾಷ್ಟ್ರೀಯ ಕಂಪನಿಗಳು ಗುರುತಿಸಿವೆ. ಹಲವು ರಾಷ್ಟ್ರಗಳು ಮಾಹಿತಿ ತಂತ್ರಜ್ಞಾನ ಅಭಿವೃದ್ಧಿಗೆ ನೆರವು ನೀಡುವಂತೆ ರಾಜ್ಯವನ್ನು ಕೋರುತ್ತಿದ್ದಾರೆ. ಶ್ರೀಲಂಕಾದ ಉನ್ನತ ಶಿಕ್ಷಣ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವರು ತಮ್ಮನ್ನು ಭೇಟಿ ಮಾಡಿದ್ದ ಸಂದರ್ಭದಲ್ಲಿ ದ್ವೀಪರಾಷ್ಟ್ರದಲ್ಲಿ ಐ.ಟಿ. ಅಭಿವೃದ್ಧಿಗೆ ನೆರವು ನೀಡುವಂತೆ ಕೋರಿದರು ಎಂದೂ ಕೃಷ್ಣ ಹೇಳಿದರು.
ನಗರದಲ್ಲಿ ಎಸ್.ಪಿ.ಐ.ಕೆ.ಇ. (ಸ್ಪೈಕ್) ಟೆಕ್ನಾಲಜೀಸ್ನ ನ್ಯೂ ಇಂಡಿಯಾ ಡಿಸೈನ್ ಸೆಂಟರ್ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಎಲೆಕ್ಟ್ರಾನಿಕ್ ಡಿಸೈನ್ ಆಟೋಮೇಷನ್ ಕ್ಷೇತ್ರದಲ್ಲೂ ಇಲ್ಲಿ ಉತ್ತಮ ಅವಕಾಶಗಳಿವೆ. ಈ ಕ್ಷೇತ್ರದಲ್ಲಿ 2000 ಸಾಲಿನಲ್ಲಿ ಮೂರು ದಶಲಕ್ಷ ಅಮೆರಿಕನ್ ಡಾಲರ್ ವಹಿವಾಟು ನಡೆದಿತ್ತು. ಇದು ಉತ್ತಮ ಬೆಳವಣಿಗೆ ಎಂದು ಅವರು ಹೇಳಿದರು.
ಹಲವು ಪ್ರತಿಷ್ಠಿತ ಕಂಪನಿಗಳು ಬೆಂಗಳೂರಿನಲ್ಲಿ ತಮ್ಮ ಶಾಖೆ ಆರಂಭಿಸುತ್ತಿವೆ. ವಿಶ್ವವಿಖ್ಯಾತ ಡಿಸೈನ್ ಸಂಸ್ಥೆಗಳು ಬೆಂಗಳೂರನ್ನೇ ಮುಖ್ಯಕೇಂದ್ರವನ್ನಾಗಿಸಿಕೊಳ್ಳುತ್ತಿವೆ. ಇದು ರಾಜ್ಯಕ್ಕೆ ಹೆಮ್ಮೆ ತರುವ ವಿಷಯ ಎಂದರು. ಈ ಸಂದರ್ಭದಲ್ಲಿ ಅವರು, ಚಿಪ್ ಡಿಸೈನ್ಗೆ ಸಂಬಂಧಿಸಿದ ಸಿಡಿ ರಾಮ್ ಬಿಡುಗಡೆ ಮಾಡಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications