ಕೈಗಾದಲ್ಲಿ ಮತ್ತೆರಡು ಪರಮಾಣು ರಿಯಾಕ್ಟರ್ಸ್ಥಾಪನೆ : ಕೃಷ್ಣ ಸ್ವಾಗತ
ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯ ಕೈಗಾದಲ್ಲಿ 2856 ಕೋಟಿ ರುಪಾಯಿ ಅಂದಾಜು ವೆಚ್ಚದಲ್ಲಿ ಮತ್ತೆರಡು ಪರಮಾಣು ರಿಯಾಕ್ಟರ್ಗಳನ್ನು ಸ್ಥಾಪಿಸುವ ಕೇಂದ್ರ ಸರಕಾರದ ನಿರ್ಧಾರವನ್ನು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಸ್ವಾಗತಿಸಿದ್ದಾರೆ.
ಕೇಂದ್ರ ಸರಕಾರ ಕೈಗೊಂಡಿರುವ ಈ ತೀರ್ಮಾನದಿಂದ ಪ್ರತಿವರ್ಷ ಹೆಚ್ಚುವರಿಯಾಗಿ 2,420 ದಶಲಕ್ಷ ಯುನಿಟ್ ವಿದ್ಯುತ್ ಉತ್ಪಾದನೆ ಆಗಲಿದೆ ಎಂದು ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ ಕೈಗಾದಲ್ಲಿ ಎರಡು ಹೊಸ ರಿಯಾಕ್ಟರ್ ಸ್ಥಾಪನೆಗೆ ಆಡಳಿತಾತ್ಮಕ ಮತ್ತು ಆರ್ಥಿಕ ಮಂಜೂರಾತಿ ನೀಡಿರುವ ಬಗ್ಗೆ ಅವರು ಸಂತಸ ವ್ಯಕ್ತಪಡಿಸಿದರು.
ಅಣು ವಿದ್ಯುತ್ ಸ್ಥಾವರಗಳು ಅಪಾಯಕಾರಿ ಎಂಬ ನಂಬಿಕೆ ತಪ್ಪು, ಈ ಆರೋಪ ಸತ್ಯದೂರವಾದದ್ದು, ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಪ್ರತಿಶತ 60ರಷ್ಟು ವಿದ್ಯುತ್ ಅಣು ಸ್ಥಾವರಗಳಿಂದಲೇ ದೊರಕುತ್ತಿದೆ ಎಂದರು. ಅಣುಸ್ಥಾವರಗಳಿಂದ ಸುರಕ್ಷಿತವಾಗಿ ವಿದ್ಯುತ್ ಪಡೆಯುವ ವಿಜ್ಞಾನ -ತಂತ್ರಜ್ಞಾನವನ್ನು ಈಗ ರಾಷ್ಟ್ರ ಹೊಂದಿದೆ ಎಂದೂ ಕೃಷ್ಣ ಹೇಳಿದರು.
ಕೈಗಾದಲ್ಲಿ ಹಾಲಿ ಎರಡು ರಿಯಾಕ್ಟರ್ಗಳು ಕಾರ್ಯನಿರ್ವಹಿಸುತ್ತಿದ್ದು, 220 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುತ್ತಿವೆ. ಕೇಂದ್ರದ ತೀರ್ಮಾನದ ರೀತ್ಯ ಮೂರನೆ ರಿಯಾಕ್ಟರ್ 2008ನೇ ಇಸವಿ ಅಕ್ಟೋಬರ್ ವೇಳೆಗೆ ಹಾಗೂ ನಾಲ್ಕನೇ ರಿಯಾಕ್ಟರ್ 2009ರ ಅಕ್ಟೋಬರ್ ಹೊತ್ತಿಗೆ ಕಾರ್ಯಾರಂಭ ಮಾಡುವ ನಿರೀಕ್ಷೆ ಇದೆ.
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications