ವಾಜಪೇಯಿ ವಿರುದ್ಧ ಸೋನಿಯಾ: ಅದೆಲ್ಲಾ ಆಟವೆಂದರು ಕೃಷ್ಣ
ಬೆಂಗಳೂರು : ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾಗಾಂಧಿ ಪ್ರಧಾನಿ ವಾಜಪೇಯಿ ವಿರುದ್ಧ ಮಾಡಿರುವ ಕಠಿಣ ಟೀಕೆಯನ್ನು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ , ಇದೆಲ್ಲಾ ರಾಜಕೀಯ ಆಟದ ಒಂದು ಭಾಗ ಎಂದು ಬಣ್ಣಿಸಿದ್ದಾರೆ.
ಆಡಳಿತ ಪಕ್ಷದವರನ್ನು ಎದುರು ಪಕ್ಷಗಳ ನಾಯಕರು ಟೀಕಿಸುವುದು ಸಹಜವಾದದ್ದು ಎಂದು ಅಭಿಪ್ರಾಯಪಟ್ಟ ಕೃಷ್ಣ , ವಾಜಪೇಯಿ ವಿರುದ್ಧ ಸೋನಿಯಾ ಕಠಿಣ ಪದಗಳನ್ನು ಬಳಸಿದ್ದಾರೆ ಎನ್ನುವ ಸುದ್ದಿಗಳನ್ನು ಸಾರಾ ಸಗಟಾಗಿ ತಳ್ಳಿಹಾಕಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ವಾಜಪೇಯಿ ಅವರನ್ನು ಸಂಸತ್ತಿನ ಕಲಾಪಕ್ಕೆ ಮುನ್ನ ಹಾಗೂ ಕಲಾಪದ ನಂತರ ಸೋನಿಯಾಗಾಂಧಿ ಟೀಕಿಸಿದ ಭಾಷೆಗೆ ಎದುರಾದ ವ್ಯಾಪಕ ವಿರೋಧದ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿದರು.
ಸರ್ವ ಪಕ್ಷಗಳ ಸಭೆಯಲ್ಲಿ ತೆಹಲ್ಕಾ ಬಯಲು ಮಾಡಿದ ರಕ್ಷಣಾ ಒಪ್ಪಂದಗಳ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಪಿಸಿ ತನಿಖೆ ನಡೆಸಲು ಸರ್ಕಾರ ಮುಕ್ತ ಮನಸ್ಸಿನಿಂದಿರುವುದಾಗಿ ಪ್ರಧಾನಿ ವಾಜಪೇಯಿ ಹೇಳಿದ್ದರು. ಆದರೆ, ಸಭೆಯಾಚೆ ಬಿಜೆಪಿಯ ವಕ್ತಾರ ವಿಜಯ್ ಕುಮಾರ್ ಮಲ್ಹೋತ್ರ ತನಿಖೆಗೆ ಒಪ್ಪುವ ವಿಷಯವನ್ನು ಪರಿಗಣಿಸಲಾಗಿಲ್ಲ ಎಂದು ಹೇಳಿಕೆ ನೀಡಿದರು. ಪ್ರಧಾನಿಯವರ ಮಾತುಗಳನ್ನು ತುಂಬು ಗೌರವದಿಂದ ಪರಿಗಣಿಸುವಾಗ, ಇಂಥಾ ಅಭಾಸಗಳು ಸಂಭವಿಸಿದಲ್ಲಿ ಆ ಮಾತುಗಳ ಮೌಲ್ಯವೆಲ್ಲಿ ಉಳಿಯುತ್ತದೆ ಎಂದು ಕೃಷ್ಣ ವಿಷಾದಿಸಿದರು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications