Get Updates
Get notified of breaking news, exclusive insights, and must-see stories!

ನೀರಾವರಿ ವಿವಾದದ ಬಗ್ಗೆ ಚರ್ಚೆಗೆ ಚುನಾವಣೆ ನಂತರ ಸರ್ವಪಕ್ಷ ಸಭೆ

ಬೆಂಗಳೂರು : ನೀರಾವರಿ ವಿವಾದದ ವಿಷಯಗಳ ಬಗ್ಗೆ ಚರ್ಚಿಸಲು ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಂತರ ಸರ್ವಪಕ್ಷಗಳ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಸೋಮವಾರ ಪ್ರಕಟಿಸಿದ್ದಾರೆ.

ಕರ್ನಾಟಕ ಹಾಗೂ ನೆರೆರಾಜ್ಯಗಳ ನೀರಾವರಿ ವಿವಾದಗಳ ಬಗ್ಗೆ ಹಾಗೂ ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಸರ್ವಪಕ್ಷ ನಾಯಕರೊಂದಿಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ಅವರು ಹೇಳಿದ್ದಾರೆ.

ಕೃಷ್ಣ ನದಿ ನೀರಿನ ವಿವಾದ, ಗೌರಿಬಿದನೂರಿನ ನೀರಾವರಿ ಯೋಜನೆ ಹಾಗೂ ಶಿರಾದಲ್ಲಿ ಹದಗೆಟ್ಟಿರುವ ನೀರಿನ ಪರಿಸ್ಥಿತಿಯ ಬಗ್ಗೆ ವಿವರಿಸಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಢು ಅವರಿಗೆ ಪತ್ರ ಬರೆಯಲಾಗಿದೆ. ನೀರಿನ ವಿಷಯದಲ್ಲಿ ಕರ್ನಾಟಕ ಹಾಗೂ ಆಂಧ್ರಪ್ರದೇಶದ ಬಾಂಧವ್ಯ ಹಾಳುಮಾಡುವ ಪ್ರಯತ್ನಗಳು ನಡೆಯುತ್ತಿವೆ. ಈ ಬಗ್ಗೆ ಚಂದ್ರಬಾಬು ನಾಯ್ಢು ಅವರೊಂದಿಗೆ ಮಾತುಕತೆ ನಡೆಸಿ, ಸಮಸ್ಯೆಯ ಪರಿಹಾರಕ್ಕೆ ಪ್ರಯತ್ನಿಸುವುದಾಗಿ ಅವರು ಹೇಳಿದರು.

ಶಿರಾ ತಾಲೂಕಿನ ಹೊನ್ನಗೊಂಡನಹಳ್ಳಿ ಕೆರೆ ಜಲಾನಯನ ಪ್ರದೇಶದಲ್ಲಿ ಸ್ವಾಭಾವಿಕವಾಗಿ ಹರಿಯುವ ನೀರನ್ನು ಆಂಧ್ರಪ್ರದೇಶ ಬಳಸಿಕೊಳ್ಳಲು ಪ್ರಯತ್ನಿಸುತ್ತಿದೆ. ಇದರಿಂದ ಶಿರಾ ತಾಲೂಕಿನ ಸಾವಿರಾರು ಎಕರೆ ಪ್ರದೇಶ ನೀರಾವರಿ ವಂಚಿತವಾಗಲಿದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಹಾಗೂ ಇನ್ನಿತರ ನೀರಾವರಿ ವಿವಾದಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಜಲಸಂಪನ್ಮೂಲ ಸಚಿವರಿಗೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಹೇಳಿದರು.

ಮುಖ್ಯಮಂತ್ರಿಗಳ ಸಭೆ : ವಿಶ್ವ ವ್ಯಾಪಾರ ಸಂಘಟನೆ ಡಬ್ಯೂಟಿಓ ಒಪ್ಪಂದದಿಂದಾಗಿ ಕೃಷಿಯ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಚರ್ಚಿಸಲು ಪ್ರಧಾನಮಂತ್ರಿಗಳು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯನ್ನು ಕರೆಯುತ್ತಿದ್ದಾರೆ. ಈ ಸಂಬಂಧ ರಾಜ್ಯ ಮಾಡಿಕೊಂಡಿದ್ದ ಮನವಿಗೆ ಪುರಸ್ಕಾರ ದೊರೆತಿದೆ ಎಂದೂ ಕೃಷ್ಣ ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+