ಚೀನಾ ಅಕ್ಕಿ ಬಂತೋ ಇಲ್ಲವೋ ..ಭಾರತದ ಅಕ್ಕಿ ಪರದೇಶಕ್ಕೆ
ನವದೆಹಲಿ : ಭಾರತೀಯ ಆಹಾರ ನಿಗಮದ ಬಳಿ ಇರುವ ಹೆಚ್ಚುವರಿ ಸಂಗ್ರಹವನ್ನು ಕಡಿಮೆ ಮಾಡುವ ಉದ್ದೇಶದಿಂದ 30 ಲಕ್ಷ ಟನ್ ಅಕ್ಕಿ ರಫ್ತು ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ಜರುಗಿದ ಕೇಂದ್ರ ಸಚಿವ ಸಂಪುಟ ಸಭೆ ಈ ತೀರ್ಮಾನವನ್ನು ಕೈಗೊಂಡಿದೆ.
ಅಂತರರಾಷ್ಟ್ರೀಯ ಬೆಲೆಯೂ ಸೇರಿದಂತೆ ವಿವಿಧ ಸಂಗತಿಗಳನ್ನು ಗಮನದಲ್ಲಿರಿಸಿಕೊಂಡು ರಫ್ತು ಮಾಡುವ ಅಕ್ಕಿಯ ಬೆಲೆಯನ್ನು ನಿರ್ಧರಿಸಲಾಗುವುದು. ಆದರೆ, ಬಡತನ ರೇಖೆಗಿಂತ ಕೆಳಗೆ ಇರುವವರಿಗೆ ವಿತರಿಸುವ ಅಕ್ಕಿಗಿಂತ ರಫ್ತು ಅಕ್ಕಿಯ ಬೆಲೆ ಯಾವುದೇ ಕಾರಣಕ್ಕೂ ಕಡಿಮೆ ಇರುವುದಿಲ್ಲ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಕೇಂದ್ರ ಸಚಿವ ಪ್ರಮೋದ್ ಮಹಾಜನ್ ತಿಳಿಸಿದರು.
ಪ್ರಸ್ತುತ , ದೇಶದ ಉಗ್ರಾಣಗಳಲ್ಲಿ 232 ಲಕ್ಷ ಟನ್ಗಳಷ್ಟು ಅಕ್ಕಿಯ ದಾಸ್ತಾನಿದ್ದು , ಇದರೊಂದಿಗೆ 113 ಲಕ್ಷ ಟನ್ ಕಾಪು ದಾಸ್ತಾನಿದೆ. ದೇಶದಲ್ಲಿ 114.24 ಲಕ್ಷ ಟನ್ಗಳಷ್ಟು ಅಕ್ಕಿ ಮಿಗಿತವಿದ್ದು , ಅಕ್ಕಿಯನ್ನು ರಫ್ತು ಮಾಡುವುದರಿಂದ ದೇಶದ ಆಂತರಿಕ ಮಾರುಕಟ್ಟೆ ಬಲಗೊಳ್ಳಲಿದೆ. ಮತ್ತಷ್ಟು ಅಕ್ಕಿ ರಫ್ತು ಮಾಡುವ ಬಗ್ಗೆ ಆಗಸ್ಟ್ನಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.
ಪ್ರಸಕ್ತ ವರ್ಷವನ್ನು ಪುಸ್ತಕ ವರ್ಷವಾಗಿ ಘೋಷಣೆ, ಉಗ್ರಾಣ ನಿಗಮಕ್ಕೆ ಅಧ್ಯಕ್ಷರನ್ನು ನೇಮಿಸುವ ಅಧಿಕಾರವನ್ನು ರಾಜ್ಯಗಳಿಗೆ ನೀಡಿಕೆ, ಸಂಘಟಿತ ಅಪರಾಧ ತಡೆಗೆ ಪೋಲೆಂಡ್ ಜತೆ ಒಪ್ಪಂದ ಹಾಗೂ ಹಿಮಾಚಲ ಪ್ರದೇಶದ ಎರಡು ವಿಮಾನ ನಿಲ್ದಾಣಗಳಿಗೆ ಹೊಸ ನಾಮಕರಣ ಕುರಿತಾದ ಮಹತ್ವದ ತೀರ್ಮಾನಗಳನ್ನು ಕೂಡ ಬುಧವಾರದ ಸಂಪುಟ ಸಭೆ ಕೈಗೊಂಡಿತು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications