ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಅಂತಾರಾಜ್ಯ ಜಲವಿವಾದ ಶೀಘ್ರ ಇತ್ಯರ್ಥಗೊಳಿಸಬೇಕು : ಕೃಷ್ಣ
ಪಾಂಡೀಚೆರಿ : ಅಂತಾರಾಜ್ಯ ಜಲವಿವಾದಗಳನ್ನು ಜಲ ನ್ಯಾಯಮಂಡಳಿಗಳು ತ್ವರಿತವಾಗಿ ಇತ್ಯರ್ಥಗೊಳಿಸಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅಭಿಪ್ರಾಯಪಟ್ಟಿದ್ದಾರೆ.
ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಕಾವೇರಿ ನದಿ ನೀರಿನ ವಿವಾದ ನ್ಯಾಯಮಂಡಳಿಯ ವ್ಯಾಪ್ತಿಯಲ್ಲಿರುವುದರಿಂದ ತಾವು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ತಿಳಿಸಿದರು.
ಆಂಧ್ರಪ್ರದೇಶ ಕರ್ನಾಟಕದ ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ನಡೆಸುತ್ತಿರುವ ಪ್ರಯತ್ನಗಳ ಬಗ್ಗೆ ಸರ್ವಪಕ್ಷ ನಾಯಕರ ಸಭೆಯ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಕರ್ನಾಟಕದ ಹಕ್ಕನ್ನು ಕಸಿದುಕೊಳ್ಳಲು ತಾವು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಸೂಚ್ಯವಾಗಿ ತಿಳಿಸಿದರು.
ಕೃತಜ್ಞತೆ : ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತಪಡಿಸಿರುವ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಕೃಷ್ಣ , ರಾಜ್ಯದ ಅತ್ಯುತ್ತಮ ಆಡಳಿತವೇ ಈ ಜಯಕ್ಕೆ ಮುಖ್ಯಕಾರಣ ಎಂದು ಹೇಳಿದರು.
Comments
Story first published: Friday, May 4, 2001, 5:30 [IST]