ನರ್ಮದಾ ಬಚಾವೋ ಮೇಧಾಗೆ ಬಸವಶ್ರೀ ಪ್ರಶಸ್ತಿ ಪ್ರದಾನ
ಚಿತ್ರದುರ್ಗ : ಚಿತ್ರದುರ್ಗದ ಮುರುಘರಾಜೇಂದ್ರ ಮಠ ಪ್ರತಿವರ್ಷ ನೀಡುವ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿಯನ್ನು ಶನಿವಾರ ನಡೆದ ಸರಳ ಹಾಗೂ ಅವಿಸ್ಮರಣೀಯ ಸಮಾರಂಭದಲ್ಲಿ ನರ್ಮದಾ ಬಚಾವೋ ಆಂದೋಲನದ ಪ್ರವರ್ತಕಿ ಮೇಧಾ ಪಾಟ್ಕರ್ಗೆ ಪ್ರದಾನ ಮಾಡಲಾಯಿತು.
ಪಾಟ್ಕರ್ ಅವರಿಗೆ ಒಂದು ಲಕ್ಷ ರುಪಾಯಿ ನಗದು ಹಾಗೂ ಬಸವಶ್ರೀ ಪ್ರಶಸ್ತಿ ಫಲಕವನ್ನು ಶ್ರೀ ಶಿವಮೂರ್ತಿ ಮುರುಘರಾಜೇಂದ್ರ ಮಹಾಸ್ವಾಮಿಗಳು ಪ್ರದಾನ ಮಾಡಿದಾಗ ಹರ್ಷೋದ್ಗಾರ ಮುಗಿಲು ಮುಟ್ಟಿತು. ಸಹಸ್ರಾರು ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳು ಕರತಾಡನದ ಮೂಲಕ ಮೇಧಾ ಪಾಟ್ಕರ್ ಅವರ ಪರಿಸರ ಹೋರಾಟಕ್ಕೆ ಬೆಂಬಲ ಸೂಚಿಸಿದರು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮೇಧಾ ಅವರು, ಸಿರಿವಂತರ ಐಷಾರಾಮಕ್ಕೆ ಆದಿವಾಸಿಗಳನ್ನು ಹಾಗೂ ದಲಿತರನ್ನು ಒಕ್ಕಲೆಬ್ಬಿಸುತ್ತಿರುವ ಬಗ್ಗೆ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಇಂದು ಭಾರತೀಯ ನಾಯಕತ್ವ ವಿದೇಶೀ ಬುದ್ಧಿಮತ್ತೆಯ ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದೆ ಎಂದು ವಿಷಾದಿಸಿದರು.
ಈ ಪ್ರಶಸ್ತಿಯು ಅಭಿವೃದ್ಧಿಯ ಹೆಸರಿನಲ್ಲಿ ಅದಿವಾಸಿಗಳು, ದಲಿತರು, ದುರ್ಬಲ ವರ್ಗದವರ ಬದುಕನ್ನೇ ಹೊಸಕುವವರ ವಿರುದ್ಧ ನಡೆದ ಹೋರಾಟಕ್ಕೆ ಸಂದ ಮನ್ನಣೆಯಾಗಿದೆ ಎಂದರು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ವಿ. ಶ್ರೀನಿವಾಸ ಪ್ರಸಾದ್, ಬರಗೂರು ರಾಮಚಂದ್ರಪ್ಪ ಮೊದಲಾದವರು ಪಾಲ್ಗೊಂಡಿದ್ದರು.
ಐದನೆಯವರು : ಮಹಾ ಮಾನವತಾವಾದಿ ಬಸವಣ್ಣನವರ ಹೆಸರಿನಲ್ಲಿ ಶ್ರೀಮಠ ಸ್ಥಾಪಿಸಿರುವ ಬಸವಶ್ರೀ ಪ್ರಶಸ್ತಿಯನ್ನು ಈ ಹಿಂದೆ ಬೆಲ್ದಾಳ್ ಸಿದ್ದರಾಮ ಶರಣರು, ಹಿರೇಮಲ್ಲೂರು ಈಶ್ವರನ್, ಡಾ. ಸುದರ್ಶನ್ ಹಾಗೂ ಅಣ್ಣಾ ಹಜಾರೆ ಅವರಿಗೆ ನೀಡಲಾಗಿತ್ತು. ಮೇಧಾ ಅವರು ಈ ಪ್ರಶಸ್ತಿ ಪಡೆದ ಐದನೆಯವರಾಗಿದ್ದಾರೆ.
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications