Get Updates
Get notified of breaking news, exclusive insights, and must-see stories!

ಹದವಾದ ಮಳೆ : ಮುಂಗಾರು ಬಿತ್ತನೆಗೆ ಚಾಲನೆ

ಬೆಂಗಳೂರು : ಏಪ್ರಿಲ್‌ ತಿಂಗಳಿನಲ್ಲೇ ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆ ಆಗಿದೆ. ನಿರೀಕ್ಷೆಗೂ ಮೀರಿ ಹದವಾಗಿ ಮಳೆಯಾಗಿರುವ ಹಿನ್ನೆಲೆಯಲ್ಲಿ ರೈತರು ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ. ಕೃಷಿ ಇಲಾಖೆ ಕೂಡ ಮುಂಗಾರು ಬಿತ್ತನೆ ಕಾರ್ಯ ಆರಂಭಿಸುವಂತೆ ರೈತರಿಗೆ ಸಲಹೆ ಮಾಡಿದೆ.

ಬೆಂಗಳೂರು, ಗದಗ, ಮಂಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ಕೋಲಾರ ಮೊದಲಾದ ಜಿಲ್ಲೆಗಳಲ್ಲಿ ಅಧಿಕ ಮಳೆ ಆಗಿದ್ದು, ವ್ಯವಸಾಯಕ್ಕೆ ಅನುಕೂಲಕರ ವಾತಾವರಣ ಸೃಷ್ಟಿಸಿದೆ. ಈ ಏಪ್ರಿಲ್‌ನಲ್ಲಿ ರಾಜ್ಯದಲ್ಲಿ ಸರಾಸರಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಚಾಮರಾಜನಗರ, ತುಮಕೂರು, ಮೈಸೂರಿನಲ್ಲಿ ಬಿತ್ತನೆ ಕಾರ್ಯ ಆರಂಭವಾಗಿದೆ.

ಈ ಮಧ್ಯೆ ಕಳೆದ 24 ಗಂಟೆಗಳ ಅವಧಿಯಲ್ಲಿ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆಗಿದೆ. ಚನ್ನಪಟ್ಟಣದಲ್ಲಿ 3 ಸೆಂಟಿ ಮೀಟರ್‌ ಮಳೆ ಆಗಿದೆ. ರಾಜ್ಯದ ಗರಿಷ್ಠ ತಾಪಮಾನದಲ್ಲಿ ಅಲ್ಪ ಬದಲಾವಣೆ ಆಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಅಲ್ಲಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಅಧಿಕವಾಗಿತ್ತು.

ರಾಜ್ಯದ ಅತಿ ಹೆಚ್ಚಿನ ತಾಪಮಾನ 44 ಡಿಗ್ರಿ ಸೆಲ್ಸಿಯಸ್‌ ಗುಲ್ಬರ್ಗಾದಲ್ಲಿ ದಾಖಲಾಗಿತ್ತು. ಮುನ್ಸೂಚನೆಯಂತೆ ಮಳೆ ಅಥವಾ ಗುಡುಗು ಸಹಿತ ಸುರಿಮಳೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಬೀಳುವ ಸಂಭವ ಇದೆ. ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಭಾಗಶಃ ಮೋಡ ಇದ್ದು, ಮಳೆ ಅಥವಾ ಗುಡುಗು ಸಹಿತ ಸುರಿಮಳೆ ಬೀಳುವ ಸಂಭವ ಇದೆ. ದಿನದ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್‌ ತಲುಪಲಿದೆ ಎಂದಿದೆ ಹವಾಮಾನ ವೀಕ್ಷಣಾಲಯದ ವರದಿ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+