ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

‘ಆಸ್ತಿ ಕರ ಸೋರಿಕೆ ತಡೆಗೆ ಸ್ವಯಂಘೋಷಿತ ಆಸ್ತಿ ತೆರಿಗೆ ಪದ್ಧತಿ’

By Staff
|
Google Oneindia Kannada News

ಬೆಂಗಳೂರು : ಮೇ 3ರ ಗುರುವಾರ ನಡೆದ ಸ್ಥಳೀಯ ಪೌರ ಸಂಸ್ಥೆಗಳ ಚುನಾವಣೆಯ ಸಂಪೂರ್ಣ ಫಲಿತಾಂಶ ಪ್ರಕಟವಾಗಿದ್ದು, ಇನ್ನು 15 ದಿನಗಳ ಒಳಗಾಗಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸ್ಥಾನ ಮೀಸಲಾತಿಯ ಸುತ್ತೋಲೆಯನ್ನು ಹೊರಡಿಸಲಾಗುವುದು ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಸಚಿವ ಚಿಮ್ಮನಕಟ್ಟಿ ಅವರು ಸೋಮವಾರ ತಿಳಿಸಿದ್ದಾರೆ.

ಸ್ಥಳೀಯ ಪೌರ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಸಾಧಿಸಿರುವ ಅಭೂತ ಪೂರ್ವ ಯಶಸ್ಸಿಗೆ ಜನತೆಗೆ ಕೃತಜ್ಞತೆ ಸಲ್ಲಿಸಿದ ಅವರು, ಅಧ್ಯಕ್ಷ - ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಚಿವರಾದ ಮಲ್ಲಿಕಾರ್ಜುನ ನಾಗಪ್ಪ, ಡಿ.ಕೆ. ಶಿವಕುಮಾರ್‌ ಹಾಗೂ ತಮ್ಮನ್ನು ಒಳಗೊಂಡ ಸಮಿತಿಯಲ್ಲಿ ಚರ್ಚಿಸಿ, ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಆಸ್ತಿ ಕರ ಸೋರಿಕೆ ತಡೆಗಟ್ಟಲು ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ಧತಿಯನ್ನು ಎಲ್ಲೆಡೆ ಜಾರಿಗೆ ತರಲಾಗುವುದು ಎಂದೂ ತಿಳಿಸಿದರು.

ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X