ಎಲ್ಲೆಡೆ ಇರುವ ಒಳ್ಳೆಯತನವೇ ದೇವರು - ಎ.ಎನ್. ಮೂರ್ತಿರಾವ್
ಹಾಸನ : ಒಳ್ಳೆಯತನ ನಮ್ಮೆಲ್ಲರ ಹೃದಯದಲ್ಲಿದ್ದು , ಈ ಒಳ್ಳೆಯತನವೇ ದೇವರು. ಆದ್ದರಿಂದ ದೇವರು ಎಲ್ಲಡೆಯೂ ಇದ್ದಾನೆ ಎಂದು ಪಂಪ ಪ್ರಶಸ್ತಿ ವಿಜೇತ ಸಾಹಿತಿ ಹಾಗೂ ಜನಪ್ರಿಯ ಲಲಿತ ಪ್ರಬಂಧಕಾರ ಎ.ಎನ್. ಮೂರ್ತಿರಾವ್ ಹೇಳಿದ್ದಾರೆ.
ಹಾಸನ ಕಲಾಭವನದಲ್ಲಿ ನಡೆದ ಹಾಸನ ಆಕಾಶವಾಣಿಯ ದಶಮಾನೋತ್ಸವ ಸಮಾರಂಭದಲ್ಲಿ ಮಾತನಾಡುತ್ತಿದ್ದ ಅವರು, ಎಲ್ಲರ ಹೃದಯದಲ್ಲಿರುವ ಒಳ್ಳೆಯತನವನ್ನೇ ದೇವರು ಎನ್ನಬಹುದೇ ಹೊರತು ದೇವರ ಕುರಿತು ಪ್ರತ್ಯೇಕವಾದ ಕಲ್ಪನೆ ಇಲ್ಲ , ವಿಶ್ವದ ಎಲ್ಲರ ಕ್ಷೇಮವನ್ನು ಚಿಂತಿಸುವುದೇ ಒಳ್ಳೆಯತನ ಎಂದು ಅಭಿಪ್ರಾಯಪಟ್ಟರು. ಕಾಲ ಕೆಟ್ಟು ಹೋಯಿತು ಎನ್ನುವುದು ಸುಳ್ಳು. ಹಿಂದಿನ ಕಾಲಕ್ಕಿಂತ ಈಗಿನ ಕಾಲವೇ ಶ್ರೇಷ್ಠ ಎಂದು ಮೂರ್ತಿರಾವ್ ಹೇಳಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಿಲ್ಲಾಧಿಕಾರಿ ಕನಿರಾಂ ಅವರು, ದೂರದರ್ಶನದಿಂದ ಆಕಾಶವಾಣಿ ಮೂಲೆಗುಂಪಾಗುತ್ತದೆ ಎನ್ನುವ ಊಹಾಪೋಹ ಸುಳ್ಳಾಗಿದೆ ಎಂದರು. ಅವರು ಶಿಲಾಕುಸುಮ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಿದರು. ಬೆಂಗಳೂರು ಆಕಾಶವಾಣಿ ಕೇಂದ್ರದ ನಿರ್ದೇಶಕ ಹೆಚ್.ಆರ್. ಕೃಷ್ಣಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications