‘ಕನ್ನಡ ವಿದ್ವತ್ತೆಯ ಇತಿಹಾಸವನ್ನು ಕ್ರಮಬದ್ಧವಾಗಿ ಬರೀಬೇಕು’
ಬೆಂಗಳೂರು : ಕವಿರಾಜ ಮಾರ್ಗದ ನೃಪತುಂಗನಿಂದ ಹಿಡಿದು ಕಿಟ್ಟೆಲ್, ರೈಸ್ವರೆಗಿನ ಕನ್ನಡ ವಿದ್ವತ್ತೆಯ ಇತಿಹಾಸವನ್ನು ಕ್ರಮಬದ್ಧವಾಗಿ ಮತ್ತು ಸಮಗ್ರವಾಗಿ ರಚಿಸಬೇಕಾಗಿದೆ. ಈ ಜವಾಬ್ದಾರಿಯನ್ನು ಯುವ ಸಂಶೋಧಕರು ಹೊತ್ತುಕೊಳ್ಳಬೇಕು ಎಂದು ಹಿರಿಯ ಸಂಶೋಧಕ ಡಾ. ಟಿ.ವಿ. ವೆಂಕಟಾಚಲ ಹೇಳಿದ್ದಾರೆ.
ಅವರು ಮಂಗಳವಾರ , ಚಿದಾನಂದ ಪ್ರಶಸ್ತಿ ಪ್ರದಾನ ಸಮಿತಿ ಏರ್ಪಡಿಸಿದ್ದ ಸಮಾರಂಭದಲ್ಲಿ ಚಿದಾನಂದ ಪುರಸ್ಕಾರ ಸ್ವೀಕರಿಸಿ ಮಾತನಾಡುತ್ತಿದ್ದರು. ಕನ್ನಡದಲ್ಲಿ ಕವಿಗಳಿಗೆ ಉತ್ತಮ ಸ್ಥಾನಮಾನ, ಪ್ರಾಶಸ್ತ್ಯ ಸಿಗುವ ಹಾಗೆ ಸಂಶೋಧಕರಿಗೆ ಸಿಗಲಿಲ್ಲ, ಅಂತರರಾಷ್ಟ್ರೀಯ ವಿಶ್ವ ಕೋಶಗಳಲ್ಲಿಯೂ ಕವಿಗಳ ಹೆಸರು ಕಾಣಸಿಗುತ್ತದೆ. ಆದರೆ ವೆಂಕಟಸುಬ್ಬಯ್ಯ, ಕಿಟ್ಟೆಲ್ರಂತಹ ವಿದ್ವಾಂಸರ ಹೆಸರು ದಾಖಲಾಗಿಲ್ಲ ಎಂದು ಶಾಸ್ತ್ರಿಗಳು ವಿಷಾದಿಸಿದರು.
ವಿದ್ವಾಂಸರಿಗೆ ಹಳೆಗನ್ನಡ ಅಧ್ಯಯನ ಪಂಚಾಕ್ಷರಿ ಜಪದಂತೆ. ಆದ್ದರಿಂದ ಪ್ರೌಢ ಶಾಲೆಯಲ್ಲಿ ಹಳೆಗನ್ನಡ ಅಧ್ಯಯನವನ್ನು ಕಡಿಮೆ ಮಾಡಬಾರದು ಎಂದು ಕಿವಿ ಮಾತು ಹೇಳಿದ ಅವರು ಕನ್ನಡ ಪ್ರೀತಿಗಾಗಿ ಸಂಶೋಧನಾಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇನೆ, ಡಿ.ಎಲ್. ನರಸಿಂಹಾಚಾರ್, ಪುಟ್ಟಪ್ಪ ಅವರಂತಹ ಗುರುಗಳೇ ಅದಕ್ಕೆ ಪ್ರೇರಣೆ ಎಂದರು. ಹಿರಿಯ ಸಂಶೋಧಕ ಚಿದಾನಂದ ಮೂರ್ತಿ ಅವರ ಹೆಸರಿನಲ್ಲಿ ನೀಡಲಾಗುತ್ತಿರುವ ಈ ಪ್ರಶಸ್ತಿಯನ್ನು ವಿದ್ವಾಂಸರು ಮತ್ತು ಸಂಶೋಧಕರಿಗೇ ಮೀಸಲಾಗಿರಿಸಬೇಕು ಎಂದು ಅವರು ಪ್ರಶಸ್ತಿ ಆಯ್ಕೆ ಸಮಿತಿಗೆ ಸಲಹೆ ಮಾಡಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications