ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೃಷ್ಣಾ ನದಿ ವಿವಾದ ಚರ್ಚೆಗೆ ಮೇ 17 ರಂದು ಸರ್ವಪಕ್ಷಗಳ ಸಭೆ

By Staff
|
Google Oneindia Kannada News

ಬೆಂಗಳೂರು : ಕೃಷ್ಣಾ ನದಿ ನೀರಿನ ಹಂಚಿಕೆ ಹಾಗೂ ಡಬ್ಲ್ಯೂಟಿಓ ಒಪ್ಪಂದದ ಕುರಿತು ರಾಜ್ಯದ ಏಕಾಭಿಪ್ರಾಯವನ್ನು ರೂಪಿಸಲು ಮೇ 17 ರಂದು ಸರ್ವಪಕ್ಷಗಳ ಸಭೆಯನ್ನು ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಕರೆದಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗವು ಗೆಜೆಟೆಡ್‌ ಹುದ್ದೆಗಳ ಸಂದರ್ಶನವನ್ನು ಅಮಾನತ್ತಿನಲ್ಲಿಟ್ಟಿರುವ ಬಗೆಗೆ ಹಾಗೂ ಇನ್ನಿತರೆ ವಿಷಯಗಳ ಕುರಿತು ಕೂಡ ಸರ್ವಪಕ್ಷ ಸಭೆ ಚರ್ಚೆ ನಡೆಸುವುದು ಎಂದು ಕೃಷ್ಣ ಹೇಳಿದರು. ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ವಿವಿಧ ಆರ್ಥಿಕ ವಲಯಗಳ ಬಗ್ಗೆ ಡಬ್ಲ್ಯೂಟಿಓ ಬೀರಬಹುದಾದ ಪರಿಣಾಮಗಳ ಬಗೆಗಿನ ಅಧ್ಯಯನಕ್ಕಾಗಿ ರಾಜ್ಯ ತಜ್ಞರ ಸಮಿತಿಯನ್ನು ರಚಿಸಿದ್ದು , ಇಂಥಾ ಸಮಿತಿಯನ್ನು ರಚಿಸಿದ ಏಕಮಾತ್ರ ರಾಜ್ಯ ಕರ್ನಾಟಕ ಎಂದು ಮುಖ್ಯಮಂತ್ರಿ ಹೆಮ್ಮೆಯಿಂದ ಹೇಳಿಕೊಂಡರು.

ಡಬ್ಲ್ಯೂಟಿಓಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲು ಮೇ 21 ರಂದು ದೆಹಲಿಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯನ್ನು ಪ್ರಧಾನಿ ವಾಜಪೇಯಿ ಕರೆದಿದ್ದಾರೆ. ಈ ಸಭೆಯಲ್ಲಿ ಮೇ 17 ರಂದು ಸರ್ವಪಕ್ಷಗಳ ಸಭೆ ತೆಗೆದುಕೊಳ್ಳುವ ತೀರ್ಮಾನವನ್ನು ಮಂಡಿಸಲಾಗುವುದು ಎಂದು ಕೃಷ್ಣ ಹೇಳಿದರು.

(ಇನ್ಫೋ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X