ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೃಷ್ಣ ಕಂಡಂತೆ ‘ಜಾತ್ಯತೀತ ವರ್ಸಸ್‌ಕೋಮುವಾದಿಗಳ ಯುದ್ಧಾರಂಭ’

By Staff
|
Google Oneindia Kannada News

ಬೆಂಗಳೂರು : ದೇಶದಲ್ಲಿ ಜಾತ್ಯತೀತ ಹಾಗೂ ಮೂಲಭೂತವಾದಿಗಳ ನಡುವಣ ಯುದ್ಧ ಪ್ರಾರಂಭವಾಗಿದ್ದು , ಐದು ರಾಜ್ಯಗಳ ಚುನಾವಣಾ ಫಲಿತಾಂಶ ಜಾತ್ಯತೀತ ರಾಜಕೀಯ ಪಕ್ಷಗಳ ಧ್ರುವೀಕರಣದ ಚಿಂತನೆಗೆ ಕಾರಣವಾಗಬಹುದೆನ್ನುವ ಅಭಿಪ್ರಾಯವನ್ನು ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ವ್ಯಕ್ತಪಡಿಸಿದ್ದಾರೆ.

ಧ್ರುವೀಕರಣ ಹಾಗೂ ಮರು ಹೊಂದಾಣಿಕೆ ಕುರಿತ ಚರ್ಚೆಗಳು ಈಗಾಗಲೇ ಪ್ರಾರಂಭವಾಗಿವೆ. ಆದರೆ, ಈ ಚರ್ಚೆಗಳು ನಮ್ಮನ್ನು ಎತ್ತ ಒಯ್ಯುತ್ತವೆ ಅನ್ನುವುದು ಗೊತ್ತಿಲ್ಲ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು ಹೇಳಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅಲ್ಪ ಬಹುಮತ ಹೊಂದಿರುವ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ, ಆ ಕ್ಷೇತ್ರಗಳಲ್ಲಿ ಕಾಂಗ್ರೆಸ್ಸನ್ನು ಜಾತ್ಯತೀತ ಜನತಾದಳ ಬೆಂಬಲಿಸುವುದು ಎಂದು ಆ ಪಕ್ಷದ ಅಧ್ಯಕ್ಷ ಎಸ್‌. ಸಿದ್ಧರಾಮಯ್ಯ ನೀಡಿರುವ ಹೇಳಿಕೆಯ ಹಿನ್ನೆಲೆಯಲ್ಲಿ ಕೃಷ್ಣ ಈ ಪ್ರತಿಕ್ರಿಯೆ ವ್ಯಕ್ತಪಡಿಸಿದರು.

ತಮಿಳುನಾಡು, ಕೇರಳ, ಪಾಂಡಿಚೆರಿಗಳಲ್ಲಿ ಮಿತ್ರ ಪಕ್ಷಗಳೊಂದಿಗೆ ಕಾಂಗ್ರೆಸ್‌ ಮುನ್ನಡೆ ಖಚಿತ. ಈ ರಾಜ್ಯಗಳ ಜನತೆ ಬದಲಾವಣೆ ಬಯಸಿದ್ದಾರೆ, ಇತ್ತೀಚಿನ ಚುನಾವಣಾ ಪ್ರಚಾರದಲ್ಲಿ ಈ ವಿಷಯ ತಮಗೆ ಮನದಟ್ಟಾಗಿದೆ ಎಂದು ಅವರು ಹೇಳಿದರು. ಸಿದ್ಧರಾಮಯ್ಯನವರ ಹೇಳಿಕೆಗೆ ಕಾಂಗ್ರೆಸ್‌ ಸಕಾರಾತ್ಮಕವಾಗಿ ಪ್ರತಿಕ್ರಿಯಿಸುತ್ತದೆ ಎಂದರು.

ಐದು ರಾಜ್ಯಗಳ ಚುನಾವಣೆಯ ಫಲಿತಾಂಶ ಕೇಂದ್ರ ಸರ್ಕಾರದ ಬಗೆಗೆ ಜನಾದೇಶವೇ ಎನ್ನುವ ಪ್ರಶ್ನೆಗೆ ಉತ್ತರಿಸಲು ಮುಖ್ಯಮಂತ್ರಿ ನಿರಾಕರಿಸಿದರು.

(ಯುಎನ್‌ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X