‘ರಾಜ್ಯದ ಹಿತವ ಸಾಯಿಬಾಬಾಗೊಪ್ಪಿಸಿದ ನಾಮಕಾವಸ್ಥೆ ಮುಖ್ಯಮಂತ್ರಿ’
ಮಡಿಕೇರಿ : ಸಚಿವೆಯಾಬ್ಬರ ಸಮ್ಮುಖದಲ್ಲೇ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಸಾಯಿಬಾಬಾ ಭಕ್ತಿಯನ್ನು ತೀವ್ರವಾಗಿ ಖಂಡಿಸಿದ ಮೈಸೂರಿನ ಜನಪ್ರಿಯ ವಿಚಾರವಾದಿ ಪ್ರೊ. ಕೆ . ರಾಮದಾಸ್, ಜನ ಪ್ರತಿನಿಧಿಗಳ ಮೂಡ ನಂಬಿಕೆಗಳನ್ನು ಪ್ರಶ್ನಿಸುವ ತಮ್ಮ ವೈಚಾರಿಕ ಸಮರವನ್ನು ಮುಂದುವರಿಸಿದ್ದಾರೆ.
ಮಡಿಕೇರಿಯ ಶನಿವಾರ ಸಂತೆಯಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, ಮುಖ್ಯಮಂತ್ರಿಯವರ ಬೇಜವಾಬ್ದಾರಿ ನಡವಳಿಕೆಯನ್ನು ಖಂಡಿಸಿದರು. ಮುಖ್ಯಮಂತ್ರಿ ಸ್ಥಾನ ಸಿಕ್ಕ ಕೂಡಲೇ, ಕೃಷ್ಣ ಸಾಯಿಬಾಬಾ ಕಾಲು ಹಿಡಿದರು. ಈ ಮೂಲಕ ನಾನು ನಾಮಕಾವಸ್ಥೆ ಮುಖ್ಯಮಂತ್ರಿ ಎಂದು ಸೂಚಿಸಿದ ಮುಖ್ಯಮಂತ್ರಿಗಳು ಕರ್ನಾಟಕವನ್ನು ನೀನೇ ಕಾಪಾಡಬೇಕೆಂದು ರಾಜ್ಯ ಹಾಗೂ ಕನ್ನಡಿಗರನ್ನು ಸಾಯಿಬಾಬಾ ಪಾದಕ್ಕೊಪ್ಪಿಸಿದರು ಎಂದು ರಾಮದಾಸ್ ವ್ಯಂಗ್ಯವಾಡಿದರು.
ರಾಮದಾಸ್ ಅವರು ಮುಖ್ಯಮಂತ್ರಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿರುವಾಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮೋಟಮ್ಮ ಮೌನ ಪ್ರೇಕ್ಷಕರಾಗಿದ್ದರು. ಈ ಮುನ್ನ ರಾಮದಾಸ್ ಅವರು ಶಿಕ್ಷಣ ಸಚಿವ ವಿಶ್ವನಾಥ್ ವಿರುದ್ಧ (ಪ್ರಾಣಿಬಲಿಗೆ ಪ್ರೋತ್ಸಾಹ ನೀಡಿದರೆಂದು) ಮೈಸೂರಿನ ಸಾರ್ವಜನಿಕ ಸಭೆಯಾಂದರಲ್ಲಿ ವಾಗ್ದಾಳಿ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.
ರಾಮದಾಸ್ ವಿರುದ್ಧ ಟೀಕೆ : ಮುಖ್ಯಮಂತ್ರಿಗಳ ವಿರುದ್ಧ ಪ್ರೊ. ರಾಮದಾಸ್ ನಡೆಸುತ್ತಿದ್ದ ವಾಗ್ದಾಳಿಯನ್ನು ಸಭೆ ಚಪ್ಪಾಳೆಯ ಮೂಲಕ ಸ್ವಾಗತಿಸಿದ ನಡುವೆಯೇ, ಕೊಡಗು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಚಂದ್ರಕಲಾ ಮುಖ್ಯಮಂತ್ರಿಗಳನ್ನು ಸಮರ್ಥಿಸಿಕೊಳ್ಳಲು ಮುಂದಾದರು. ಕೃಷ್ಣ ಅವರ ಸಾಧನೆಗಳನ್ನು ಪಟ್ಟಿ ಮಾಡಿದ ಅವರು, ಮುಖ್ಯಮಂತ್ರಿಗಳ ನಡವಳಿಕೆಯನ್ನು ಪ್ರಶ್ನಿಸಲು ಇದು ವೇದಿಕೆಯಲ್ಲ . ರಾಮದಾಸ್ ವೇದಿಕೆಯ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications