ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರಾವಳಿಯಲ್ಲಿ ಮಳೆಯ ಸೂಚನೆ

By Staff
|
Google Oneindia Kannada News

ಬೆಂಗಳೂರು : ರಾಜ್ಯದಲ್ಲಿ ಬಿಸಿಲು ಏರುತ್ತಿದೆ. ಒಣಹವೆ ಮತ್ತೆ ಮುಂದುವರಿದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಯಾವ ಭಾಗದಲ್ಲೂ ಗಣನೀಯ ಪ್ರಮಾಣದಲ್ಲಿ ಮಳೆ ಆದ ವರದಿ ಇಲ್ಲ. ಗರಿಷ್ಠ ಉಷ್ಣಾಂಶದಲ್ಲಿ ಮಾತ್ರ ಅಲ್ಪ ಬದಲಾವಣೆ ಕಂಡುಬಂದಿದೆ.

ಉತ್ತರ ಒಳನಾಡಿನ ಅಲ್ಲಲ್ಲಿ ಗರಿಷ್ಠ ತಾಪಮಾನ ಸಾಮಾನ್ಯ ಮಟ್ಟಕ್ಕಿಂತ ಅಧಿಕವಾಗಿತ್ತು. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಅದು ಸಾಮಾನ್ಯ ಮಟ್ಟದಲ್ಲಿತ್ತು. ರಾಜ್ಯದ ಅತಿ ಹೆಚ್ಚು ತಾಪಮಾನ ಗುಲ್ಬರ್ಗಾದಲ್ಲಿ 44ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು.

ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ರೀತ್ಯ ಮುಂದಿನ 36 ಗಂಟೆಗಳ ಅವಧಿಯಲ್ಲಿ ಕರಾವಳಿಯಲ್ಲಿ ಮಳೆ ಅಥವಾ ಗುಡುಗಿನಿಂದ ಕೂಡಿದ ಸುರಿಮಳೆ ಬೀಳುವ ಸಂಭವ ಇದೆ. ಒಳನಾಡುಗಳಲ್ಲಿ ಒಣಹವೆಯೇ ಮುಂದುವರಿಯಲಿದೆ.

ರಾಜ್ಯದ ಹವಾಮಾನದಲ್ಲಿ ಗಮನಾರ್ಹವಾದ ಯಾವುದೇ ಬದಲಾವಣೆ ಇರುವುದಿಲ್ಲ. ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಮುಖ್ಯವಾಗಿ ಶುಭ್ರ ಆಕಾಶ ಇದ್ದು ದಿನದ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್‌ ತಲುಪುವ ಸೂಚನೆ ಇದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X