ಅನಿವಾಸಿ ಕನ್ನಡಿಗ ನಟರಾಜ್ರಿಗೆ ‘ ಹೃದಯವಂತರು’ ಪ್ರಶಸ್ತಿ
ಶಿವಮೊಗ್ಗ : ಚಿತ್ರದುರ್ಗದ ಅಬಕಾರಿ ಜಿಲ್ಲಾಧಿಕಾರಿ , ಲೇಖಕ ರೋಹಿದಾಸ್ ನಾಯಕ್ ಹಾಗೂ ಅನಿವಾಸಿ ಭಾರತೀಯ ಬರಹಗಾರ, ಅಮೆರಿಕೆಯಲ್ಲಿ ಯ ಕನ್ನಡಿಗರ ಸಂಘಟಕರೂ ಆದ ನಟರಾಜ್ ಅವರಿಗೆ ‘ಹೃದಯವಂತರು’ ಪ್ರಶಸ್ತಿಯನ್ನು ಇತ್ತೀಚೆಗೆ ನಡೆದ ಸಮಾರಂಭವೊಂದರಲ್ಲಿ ಆನಂದಪುರಂ ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಪ್ರದಾನ ಮಾಡಿದರು.
ನವರತ್ನ ಇಂಟರ್ ನ್ಯಾಶನಲ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಮಂಗಳೂರಿನ ಹೃದಯವಾಹಿನಿ ಪಾಕ್ಷಿಕದ ದ್ವಿತೀಯ ವಾರ್ಷಿಕೋತ್ಸವ ಸಂಬಂಧ ಪ್ರಶಸ್ತಿಯನ್ನು ನೀಡಲಾಯಿತು. ಪ್ರಶಸ್ತಿ ವಿತರಣೆಯ ನಂತರ ಮಾತನಾಡಿದ ಸ್ವಾಮೀಜಿ, ಬರಹಗಳು- ಲೇಖನಗಳು ಕೇವಲ ಮನಸ್ಸನ್ನು ತಟ್ಟಿದರೆ ಸಾಲದು. ಅವು ಹೃದಯವನ್ನು ಮುಟ್ಟುವಂತಿದ್ದಾಗ ಮಾತ್ರ ಆ ಬರಹಗಳ ಮೌಲ್ಯ ಹೆಚ್ಚುತ್ತದೆ ಎಂದರು. ಈ ನಿಟ್ಟಿನಲ್ಲಿ ಹೆಜ್ಜೆಯಿಡುತ್ತಿರುವ (ಎರಡನೇ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿರುವ) ಹೃದಯವಾಹಿನಿ ಪಾಕ್ಷಿಕವನ್ನು ಅವರು ಅಭಿನಂದಿಸಿದರು.
ಇದೇ ಸಂದರ್ಭದಲ್ಲಿ ಹೃದಯವಾಹಿನಿ ಸಂಪಾದಕ ಕೆ.ಪಿ. ಮಂಜುನಾಥ್ ಅವರ ‘ಶ್ರವಣ ನಯನ’ ಲಘು ಬರಹಗಳ ಕೃತಿಯನ್ನು ಸಹ್ಯಾದ್ರಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ನೋ.ಸಂ. ತಿಮ್ಮೇಗೌಡ ಬಿಡುಗಡೆ ಮಾಡಿದರು. ಪತ್ರಿಕೆಯ ವತಿಯಿಂದ ಆಯೋಜಿಸಲಾಗಿದ್ದ ಜಾಗತಿಕ ಮಟ್ಟದ ಕನ್ನಡ ಕಥಾ ಸ್ಪರ್ಧೆಯ ವಿಜೇತರಿಗೆ ಮುಖ್ಯ ಅತಿಥಿಗಳು ಬಹುಮಾನಗಳನ್ನು ವಿತರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಕಲಗೋಡು ರತ್ನಾಕರ ವಹಿಸಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications