‘ಕುಂಬ್ಳೆ ಅಗ್ನಿಪರೀಕ್ಷೆಗಳಲ್ಲಿ ಪಾಸಾಗಬೇಕಿದೆ’ - ಜಾನ್ರೈಟ್
ಬೆಂಗಳೂರು : ಬಲಭುಜ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಅನಿಲ್ ಕುಂಬ್ಳೆ ತಂಡಕ್ಕೆ ಮರಳಲು ಸಾಕಷ್ಟು ಹೋರಾಟ ನಡೆಸಬೇಕಾಗಿದೆ ಎಂದು ಭಾರತ ಕ್ರಿಕೆಟ್ ತಂಡದ ತರಬೇತುದಾರ ಜಾನ್ ರೈಟ್ ಹೇಳುವುದರೊಂದಿಗೆ ಕುಂಬ್ಳೆಯವರ ಮುಂದಿನ ದಾರಿ ಹೂವಿನ ಹಾದಿಯಲ್ಲ ಅನ್ನುವುದು ಸ್ಪಷ್ಟವಾಗಿದೆ.
51 ದಿನಗಳ ಜಿಂಬಾಬ್ವೆ ಪ್ರವಾಸದ ಹಿನ್ನೆಲೆಯಲ್ಲಿ, ಭಾನುವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪ್ರಾರಂಭವಾದ ಆರು ದಿನಗಳ ತರಬೇತಿ ಶಿಬಿರದ ಸಂದರ್ಭದಲ್ಲಿ ರೈಟ್ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಇತ್ತೀಚೆಗಷ್ಟೇ ಡಾ. ಫರ್ಗ್ಯೂಸನ್ ಅವರಿಂದ ಚಿಕಿತ್ಸೆ ಪಡೆದು ದಕ್ಷಿಣ ಆಫ್ರಿಕಾದಿಂದ ವಾಪಸ್ಸಾಗಿದ್ದ ಕುಂಬ್ಳೆ ಅಕ್ಟೋಬರ್ನಲ್ಲಿನ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತಾವು ಲಭ್ಯರೆಂದು ತಿಳಿಸಿದ್ದರು. ಆದರೆ, ಆ ಹಾದಿಯಲ್ಲಿ ಕುಂಬ್ಳೆ ಕಠಿಣ ಸವಾಲನ್ನು ಎದುರಿಸಬೇಕಾಗುವ ಇಂಗಿತವನ್ನು ರೈಟ್ ವ್ಯಕ್ತಪಡಿಸಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ತರಬೇತಿ ಶಿಬಿರಕ್ಕೆ ಹೋಲಿಸಿದರೆ, ಈ ಬಾರಿ ಎಲ್ಲಾ 26 ಮಂದಿ ಸಂಭವನೀಯ ಆಟಗಾರರು ದೈಹಿಕವಾಗಿ ಹೆಚ್ಚು ಸಶಕ್ತರಾಗಿದ್ದಾರೆ. ಪ್ರತಿಯಾಬ್ಬ ಆಟಗಾರನೂ ಮತ್ತೊಬ್ಬ ಆಟಗಾರನನ್ನು ಅರ್ಥೈಸಿಕೊಳ್ಳಲು ಈ ಶಿಬಿರ ಸಹಾಯಕವಾಗುತ್ತದೆ ಎಂದು ಎಂದು ರೈಟ್ ಅಭಿಪ್ರಾಯಪಟ್ಟರು . ಆಟಗಾರರಿಗೆ ನೆರವು ನೀಡುವ ದೃಷ್ಟಿಯಿಂದ ಸಿದ್ಧತಾ ಶಿಬಿರದಲ್ಲಿ ಕುಂಬ್ಳೆ ಕೂಡ ಭಾಗವಹಿಸಿದ್ದಾರೆ. ಆದರೆ, ಅವರು ಸಂಭವನೀಯರ ಪಟ್ಟಿಯಲ್ಲಿಲ್ಲ .
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications