ಬಿಜಾಪುರ : ಬ್ಯಾರೇಜ್ ಗೇಟು ಮುರಿದುನೀರು ಹರಿಸಿದ ರೈತರು
ಬಿಜಾಪುರ : ಮಹಾರಾಷ್ಟ್ರ ಸರ್ಕಾರ ನೀರು ಬಿಡುತ್ತದೆಂದು ಬೊಗಸೆಯಾಡ್ಡಿ ಕಾದಿದ್ದ ಈ ಭಾಗದ ರೈತರ ಸಹನೆ ಸೋಮವಾರ ರೊಚ್ಚಿಗೆ ಬದಲಾಯಿತು. ಸಾವಿರಾರು ಸಂಖ್ಯೆಯಲ್ಲಿ ಗುಂಪುಗೂಡಿದ ರೈತರು ಸೋಮವಾರ ಸಂಜೆ ಶಿರನಾಳ- ಹೌಜ್ ಬ್ಯಾರೇಜ್ನ ಗೇಟುಗಳನ್ನು ಕಿತ್ತೆಸೆದು ಉಜನಿ ನೀರು ಕರ್ನಾಟಕದ ಭೀಮಾನದಿ ಪಾತ್ರದಲ್ಲಿ ಹರಿಯುವಂತೆ ಮಾಡುವಲ್ಲಿ ಯಶಸ್ವಿಯಾದರು.
ರೈತರು ಗೇಟ್ಗಳನ್ನು ಕಿತ್ತೆಸೆಯುವುದನ್ನು ಪಹರೆಗಿದ್ದ ಕರ್ನಾಟಕ ಹಾಗೂ ಮಹಾರಾಷ್ಟ್ರ ಪೊಲೀಸರು ಅಸಹಾಯಕರಾಗಿ ನೋಡುತ್ತಾ ನಿಲ್ಲಬೇಕಾಯಿತು. ಬ್ಯಾರೇಜ್ನ 100 ಗೇಟ್ಗಳಲ್ಲಿ ನಡುಭಾಗದ ಸುಮಾರು 25 ಗೇಟ್ಗಳನ್ನು ರೈತರು ಕಿತ್ತು ನೀರಲ್ಲೆಸೆದರು. ಇದರಿಂದಾಗಿ ಆ ಬದಿಯಲ್ಲಿ ಸಂಗ್ರಹವಾಗಿದ್ದ ನೀರು ಕರ್ನಾಟಕದಲ್ಲಿಯ ನದಿ ಪ್ರದೇಶದಕ್ಕೆ ಹರಿದುಬರುತ್ತಿದೆ.
ಪೊಲೀಸರ ಸಮ್ಮುಖದಲ್ಲೇ ರೈತರು ಗೇಟ್ಗಳನ್ನು ಮುರಿದಿದ್ದು , ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದರಿಂದ ಮಹಾರಾಷ್ಟ್ರ ಪೊಲೀಸರು ಗೋಲಿಬಾರ್ಗೆ ಸಿದ್ಧತೆ ನಡೆಸಿದರು. ಗೋಲಿಬಾರ್ ಸುಳಿವರಿತ ರೈತರು ತಕ್ಷಣವೇ ಬ್ಯಾರೆಜ್ನ ಸ್ಥಳದಿಂದ ದಿಕ್ಕಾಪಾಲಾಗಿ ಓಡಿದರು. ಆದರೆ, ಆ ಹೊತ್ತಿಗೆ ನೀರಿನ ಹರಿವು ಪ್ರಾರಂಭವಾಗಿತ್ತು .
ಕೃಷ್ಣ ಅಸಮಾಧಾನ : ಬ್ಯಾರೇಜ್ನ ಗೇಟ್ಗಳನ್ನು ರೈತರು ಕಿತ್ತೆಸೆದ ಬಗ್ಗೆ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅಸಮಾಧಾನಗೊಂಡಿದ್ದಾರೆ ಎಂದು ಬಿಜಾಪುರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಆರ್. ಕಾಶಪ್ಪನವರ್ ಹೇಳಿದ್ದಾರೆ.
ಇನ್ನೆರಡು ಮೂರು ದಿನಗಳಲ್ಲಿ ನೀರು ಬಿಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿತ್ತು . ಅಷ್ಟರಲ್ಲಿಯೇ ರೈತರು ಸಹನೆ ಕಳಕೊಂಡು ಈ ಕ್ರಮಕ್ಕೆ ಮುಂದಾಗಿದ್ದು ಸರಿಯಲ್ಲ ಎಂದು ಕಾಶಪ್ಪನವರ್ ಹೇಳಿದ್ದಾರೆ.(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications