ಬಡ ಮೂತ್ರಪಿಂಡ ರೋಗಿಗಳಿಗೆ ಶಾರದಾಆಸ್ಪತ್ರೆಯೆಂಬ ಧನ್ವಂತರಿ!
ಬೆಂಗಳೂರು : ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವ ಕಡು ಬಡವರಿಗೆ ಉಚಿತ ಚಿಕಿತ್ಸೆ ನೀಡಲು ಶಂಕರಪುರದ ಶಾರದಾ ಧನ್ವಂತರಿ ಚಾರಿಟೇಬಲ್ ಆಸ್ಪತ್ರೆ ‘ಹಿಮೊಡಯಲಾಸಿಸ್’ ಕೇಂದ್ರವನ್ನು ಪ್ರಾರಂಭಿಸಿದೆ.
ಮೂತ್ರಪಿಂಡ ಕಾಯಿಲೆಯಿಂದ ಬಳಲುವ ರೋಗಿಗಳಿಗೆ ರಿಯಾಯಿತಿ ದರದಲ್ಲಿ ಡಯಾಲಿಸಿಸ್ ಚಿಕಿತ್ಸೆಯನ್ನು ಒದಗಿಸುವ ಈ ಕೇಂದ್ರದಲ್ಲಿ ಕಡು ಬಡವರಿಗೆ ಚಿಕಿತ್ಸೆ ಸಂಪೂರ್ಣ ಉಚಿತ. ಶೃಂಗೇರಿ ಪೀಠದ ಭಾರತಿ ತೀರ್ಥ ಸ್ವಾಮೀಜಿ ಅವರ 51 ನೇ ವರ್ಧಂತಿ ಅಂಗವಾಗಿ ಅಭಿನವ ವಿದ್ಯಾಪೀಠ ಮಹಾಸ್ವಾಮಿಗಳ ಪೀಠಾರೋಹಣ ರಜತ ಮಹೋತ್ಸವ ಆಚರಣೆ ವೈದ್ಯಕೀಯ ಪ್ರತಿಷ್ಠಾನವು ಈ ಡಯಾಲಿಸಿಸ್ ಕೇಂದ್ರವನ್ನು ತೆರೆದಿದೆ.
ಬೆಂಗಳೂರು ದಕ್ಷಿಣ ರೋಟರಿ ಕ್ಲಬ್ ಸಂಸ್ಥೆ, ನೂತನ ಕೇಂದ್ರಕ್ಕೆ ಎರಡು ಡಯಾಲಿಸಿಸ್ ಯಂತ್ರಗಳನ್ನು ಹಾಗೂ ಐಡಿಬಿಐ ಮತ್ತು ಐಸಿಐಸಿಐ ಸಂಸ್ಥೆಗಳು ತಲಾ ಒಂದೊಂದು ಯಂತ್ರಗಳನ್ನು ಕೊಡುಗೆಯಾಗಿ ನೀಡಿವೆ. ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಮೇಯರ್ ಪ್ರೇಮಾ ಕಾರ್ಯಪ್ಪ ಕೇಂದ್ರವನ್ನು ಉದ್ಘಾಟಿಸಿದರು. ಆಸ್ಪತ್ರೆ ಇರುವ ಶಂಕರಪುರದ 1 ನೇ ಅಡ್ಡರಸ್ತೆಗೆ ಶಾರದಾ ಧನ್ವಂತರಿ ರಸ್ತೆ ಎಂದು ನಾಮಕರಣ ಮಾಡುವುದಾಗಿ ಅವರು ಆಶ್ವಾಸನೆ ನೀಡಿದರು.
ಉನ್ನತ ಶಿಕ್ಷಣ ಸಚಿವ ಡಾ.ಜಿ. ಪರಮೇಶ್ವರ್, ಇನ್ಫೋಸಿಸ್ ಪ್ರತಿಷ್ಠಾನದ ಟ್ರಸ್ಟಿ ಸುಧಾಮೂರ್ತಿ, ರೋಟರಿ ಜಿಲ್ಲಾ ಗವರ್ನರ್ ಡಾ.ಪೃಥ್ವಿ ರಾವಲ್, ಹಿರಿಯ ವೈದ್ಯ ಡಾ. ಎನ್.ಸಿ. ತಲ್ವಾಲ್ಕರ್, ಆಡಳಿತಾಧಿಕಾರಿ ವಿ.ಆರ್.ಗೌರಿಶಂಕರ್ ಹಾಗೂ ಟ್ರಸ್ಟ್ನ ಕಾರ್ಯದರ್ಶಿ ಕೆ.ವೆಂಕಟರಮಣನ್ ಡಯಾಲಿಸಿಸ್ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಹಾಜರಿದ್ದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications