ಮಹಾರಾಷ್ಟ್ರ ಪೊಲೀಸರಿಂದ ಸಚಿವ ಕಾಶಪ್ಪನವರ್ ಮೇಲೆ ಮೊಕದ್ದಮೆ
ಬಿಜಾಪುರ :ಸಾವಿರಾರು ರೈತರು ಸೋಮವಾರ ಸಂಜೆ ಶಿರನಾಳ- ಹೌಜ್ ಬ್ಯಾರೇಜ್ನ ಗೇಟುಗಳನ್ನು ಕಿತ್ತೆಸೆದು ಉಜನಿ ನೀರು ಕರ್ನಾಟಕದ ಭೀಮಾನದಿ ಪಾತ್ರದಲ್ಲಿ ಹರಿಯುವಂತೆ ಮಾಡಿದ ಪ್ರಕರಣದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಆರ್. ಕಾಶಪ್ಪನವರ್ ಸೇರಿದಂತೆ ಇತರ 50 ಮಂದಿಯ ಮೇಲೆ ಮಹಾರಾಷ್ಟ್ರ ಸರ್ಕಾರ ಮೊಕದ್ದಮೆ ಹೂಡಿದೆ.
ಸಚಿವ ಕಾಶಪ್ಪನವರನ್ನು ಆರೋಪಟ್ಟಿಯಲ್ಲಿ ಮೊದಲಿಗನಾಗಿ ಮಹಾರಾಷ್ಟ್ರ ಪೊಲೀಸರು ಹೆಸರಿಸಿದ್ದಾರೆ. ಇದರಿಂದಾಗಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಪೇಚಿಗೆ ಸಿಲುಕುವ ಪ್ರಸಂಗ ಎದುರಾಗಿರುವುದು ಮಾತ್ರವಲ್ಲದೆ, ಉಭಯ ರಾಜ್ಯಗಳ ನಡುವೆ ಗಡಿ ವಿವಾದದ ಜೊತೆಗೆ ನೀರು ಸಂಘರ್ಷವೂ ಪ್ರಾರಂಭವಾದಂತಾಗಿದೆ.
ಕಾಂಗ್ರೆಸ್ ಮುಖಂಡ ಚಂದ್ರಕಾಂತ ಬಿಜ್ಜರಗಿ, ಭೀಮಾ ನದಿ ನೀರು ಸಂರಕ್ಷಣಾ ಸಮಿತಿ ಸಂಚಾಲಕ ಪಂಚಪ್ಪ ಕಲ್ಬುರ್ಗಿ, ದೇವಪ್ಪ ಭೈರಗೊಂಡ, ಮಲ್ಲಪ್ಪ ಕುರಿ ಮತ್ತಿತರರನ್ನು ಆರೋಪಿಗಳೆಂದು ಹೆಸರಿಸಲಾಗಿದೆ. ಐಪಿಸಿ ಸೆಕ್ಷನ್ 143, 147, 427, 430 ಹಾಗೂ ಮಹಾರಾಷ್ಟ್ರ ನೀರಾವರಿ ಕಾಯ್ದೆ ಸೆಕ್ಷನ್ 93,94 ರ ಅಡಿ ಮೊಕದ್ದಮೆಗಳನ್ನು ದಾಖಲಿಸಲಾಗಿದ್ದು , ಆರೋಪಿಗಳ ವಿರುದ್ಧ ಗಲಭೆ, ಗಲಭೆಗೆ ಪ್ರಚೋದನೆ ಹಾಗೂ ನೀರು ಪೂರೈಕೆ ವ್ಯವಸ್ಥೆಗೆ ಹಾನಿ ಆರೋಪಗಳನ್ನು ಹೊರಿಸಲಾಗಿದೆ.
ಅಪರಾಧಿ ನಾನಲ್ಲವೆನ್ನುತ್ತಾರೆ ಸಚಿವ ಕಾಶಪ್ಪನವರ್
ಬ್ಯಾರೇಜ್ ಗೇಟ್ಗಳನ್ನು ಉದ್ರಿಕ್ತ ರೈತರು ಕಿತ್ತೆಸೆದಿರುವುದರಲ್ಲಿ ತಮ್ಮ ಕೈವಾಡವೇನೂ ಇಲ್ಲ ಎಂದು ಸಚಿವ ಕಾಶಪ್ಪನವರ್ ಸ್ಪಷ್ಟಪಡಿಸಿದ್ದಾರೆ. ಇಷ್ಟಕ್ಕೂ ಗಲಭೆ ನಡೆಯುತ್ತಿರುವ ಸಂದರ್ಭದಲ್ಲಿ ತಾವು ಆ ಸ್ಥಳದಲ್ಲಿಯೇ ಇರಲಿಲ್ಲ . ಮಹಾರಾಷ್ಟ್ರ ನೀರಾವರಿ ಇಲಾಖೆಯ ಸೂಪರಿಟೆಂಡೆಂಟ್ ಇಂಜಿನಿಯರ್ ಕೋರೆ ಅವರನ್ನು ಭೇಟಿ ಮಾಡಲು ಬ್ಯಾರೇಜಿನ ಸ್ಥಳಕ್ಕೆ ಭೇಟಿ ನೀಡಿದ್ದೆವು. ಕೋರೆ ಅವರು ಅಲ್ಲಿರಲಿಲ್ಲವಾದ್ದರಿಂದ ವಾಪಸ್ಸಾದೆವು. ಆನಂತರವೇ ಗಲಭೆ ನಡೆದಿದೆ ಎಂದು ಕಾಶಪಪ್ಪನವರ್ ಹೇಳಿಕೆ ನೀಡಿದ್ದಾರೆ.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications