ಐಎಎಸ್ ಪರೀಕ್ಷೆಯಲ್ಲಿ ದೇಶಕ್ಕೆ ಮೊದಲಿಗಳಾದ ಕನ್ನಡತಿ ವಿಜಯಲಕ್ಷ್ಮಿ
ಬೆಂಗಳೂರು : ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ ಶಂಕರ ಬಿದರಿ ಅವರ ಮಗಳು ವಿಜಯಲಕ್ಷ್ಮಿ ಬಿದರಿ ಕೇಂದ್ರ ಲೋಕಸೇವಾ ಆಯೋಗದ ನಾಗರಿಕ ಸೇವಾ ಪರೀಕ್ಷೆಯಲ್ಲಿ ದೇಶಕ್ಕೇ ಪ್ರಥಮ ಸ್ಥಾನ ಗಳಿಸಿದ್ದಾರೆ. ನಾಗರಿಕ ಸೇವಾ ಪರೀಕ್ಷೆಯಲ್ಲಿ ಕನ್ನಡಿಗರೊಬ್ಬರು ಪ್ರಥಮ ಸ್ಥಾನ ಪಡೆಯುತ್ತಿರುವುದು ಇದೇ ಮೊದಲು.
ಅಲ್ಲದೆ, ಈ ಬಾರಿ ನಾಗರಿಕ ಸೇವಾ ಪರೀಕ್ಷೆಯ ಮರುಯತ್ನದಲ್ಲೂ ಇವರು ದೇಶಕ್ಕೆ ಮೊದಲಿಗರಾಗಿದ್ದಾರೆ. ಪ್ರಸ್ತುತ ವಿಜಯಲಕ್ಷ್ಮಿ ಅವರು ಹರಿಯಾಣದ ಫರೀದಾಬಾದ್ನಲ್ಲಿ ಭಾರತೀಯ ಕಂದಾಯ ಸೇವೆಯ (ಐಆರ್ಎಸ್) ಕೇಂದ್ರ ಅಬಕಾರಿ ಇಲಾಖೆಯಲ್ಲಿ ಪ್ರೊಬೇಷನರಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು.
ಮೂರು ಲಕ್ಷ ಮಂದಿಯ ಪೈಕಿ ನಾನು ಮೊದಲಿಗಳಾಗಿರುವುದು ತುಂಬಾ ಖುಷಿ ತಂದುಕೊಟ್ಟಿದೆ ಎಂದು ವಿಜಯಲಕ್ಷ್ಮಿ, ಇಂಡಿಯಾ ಇನ್ಫೋ ಸಂಪರ್ಕಿಸಿದಾಗ ಹೇಳಿದರು. ಆರಂಭದಿಂದಲೂ ಅವಳು ಶ್ರಮಪಟ್ಟು ಮಾಡಿರುವ ಸಾಧನೆ ಇಡೀ ಕರ್ನಾಟಕ್ಕೆ ಕೀರ್ತಿ ತಂದಿದೆ. ಶ್ಲಾಘನೀಯ ಸಾಧನೆ ಮಾಡಿದ್ದಾಳೆ ಎಂದು ಶಂಕರ್ ಬಿದರಿ ತಮ್ಮ ಖುಷಿಯನ್ನು ಕನ್ನಡ ಇಂಡಿಯಾಇನ್ಫೋ ಬಳಿ ಹಂಚಿಕೊಂಡಿದ್ದಾರೆ.
ವಿಜಯಲಕ್ಷ್ಮಿ ಅವರು ನಗರದ ಆರ್.ವಿ. ಕಾಲೇಜಿನ ಕಂಪ್ಯೂಟರ್ ಸೈನ್ಸ್ ಪದವೀಧರೆ. ಪ್ರಸ್ತುತ ನಿರ್ವಹಿಸುತ್ತಿರುವ ಕೆಲಸಕ್ಕೆ ರಾಜೀನಾಮೆ ನೀಡಿ ಮುಂದಿನ ವಾರ ಬೆಂಗಳೂರಿಗೆ ಆಗಮಿಸಲಿರುವ ವಿಜಯಲಕ್ಷ್ಮಿ ಸೆಪ್ಟೆಂಬರ್ನಲ್ಲಿ ತರಬೇತಿಗಾಗಿ ಮಸ್ಸೂರಿಗೆ ತೆರಳಲಿದ್ದಾರೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications