ಭೀಮೆ- ಕೃಷ್ಣೆಯರಿಗೆ ನೀರುಹರಿಸಲು ಒಪ್ಪಿಕೊಂಡ ಮಹಾರಾಷ್ಟ್ರ
ಬಿಜಾಪುರ : ಜಲಕ್ಷಾಮದಿಂದ ತತ್ತರಿಸುತ್ತಿರುವ ಜಿಲ್ಲೆಯ ಜನರಿಗೆ ನೀರು ಹನಿಸಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದ್ದು , ಉಜಿನಿ ಅಣೆಕಟ್ಟೆಯಿಂದ ಅರ್ಧ ಟಿಎಂಸಿ ನೀರನ್ನು ಭೀಮಾ ನದಿಗೆ ಹಾಗೂ ಕೊಯ್ನಾದಿಂದ ಒಂದು ಟಿಎಂಸಿ ನೀರನ್ನು ಕೃಷ್ಣಾ ನದಿಗೆ ಹರಿಸಲು ಒಪ್ಪಿಕೊಂಡಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ವಿಲಾಸ್ರಾವ್ ದೇಶ್ಮುಖ್ ಅವರನ್ನು ಬಿಜಾಪುರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಆರ್. ಕಾಶಪ್ಪನವರ್ ಭೇಟಿ ಮಾಡಿ ನಡೆಸಿದ ಮಾತುಕತೆ ಫಲಪ್ರದವಾಗಿದೆ. ಬ್ಯಾರೇಜ್ ಗೇಟುಗಳನ್ನು ಮುರಿದ ಆರೋಪದ ಮೇಲೆ ಕಾಶಪ್ಪನವರ್ ಮೇಲೆ ಮಹಾರಾಷ್ಟ್ರ ಪೊಲೀಸರು ದಾಖಲು ಮಾಡಿದ್ದ ಮೊಕದ್ದಮೆಯ ವಿಚಾರಣೆಯನ್ನು ಮುಂದುವರೆಸದಿರುವ ಆಶ್ವಾಸನೆಯನ್ನು ಕೂಡ ದೇಶ್ಮುಖ್ ಅವರು ಕಾಶಪ್ಪನವರ್ರಿಗೆ ಮಾತುಕತೆಯ ಸಂದರ್ಭದಲ್ಲಿ ನೀಡಿದ್ದಾರೆ.
ಮಾತುಕತೆಯ ಸಂದರ್ಭದಲ್ಲಿ ರಾಷ್ಟ್ರೀಯವಾದಿ ಕಾಂಗ್ರೆಸ್ ಅಧ್ಯಕ್ಷ ಶರದ್ ಪವಾರ್ ಹಾಗೂ ಉಪ ಮುಖ್ಯಮಂತ್ರಿ ಛಗಲ್ ಭುಜಬಲ್ ಹಾಜರಿದ್ದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಪತ್ರವನ್ನು ಮಹಾರಾಷ್ಟ್ರದ ಮುಖ್ಯಮಂತ್ರಿಗೆ ಕಾಶಪ್ಪನವರ್ ತಲುಪಿಸಿದರು.
ಚಳವಳಿ ಕೈಬಿಡಿ : ಮಹಾರಾಷ್ಟ್ರ ಸರ್ಕಾರ ನೀರು ಹರಿಸಲು ಒಪ್ಪಿರುವುದರಿಂದ, ಭೀಮಾನದಿಗೆ ನೀರು ಹರಿಸುವ ಸಂಬಂಧ, ನದಿಯ ನೀರನ್ನು ಅವಲಂಬಿಸಿರುವ ಗ್ರಾಮಗಳ ಜನರು ನಡೆಸುತ್ತಿದ್ದ ಆಮರಣ ನಿರಶನವನ್ನು ಕೈ ಬಿಡಬೇಕೆಂದು ಕಾಶಪ್ಪನವರ್ ಚಳವಳಿ ನಿರತರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇನ್ನು ಒಂದೆರಡು ದಿನಗಳಲ್ಲಿ ನೀರು ಹರಿಯುವ ಪ್ರಕ್ರಿಯೆ ಪ್ರಾರಂಭವಾಗಬಹುದೆಂದು ಅವರು ಹೇಳಿದ್ದಾರೆ.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications