2004 ರ ಹೊತ್ತಿಗೆ ದೇವನಹಳ್ಳಿಗೆ ವಿಮಾನಗಳುಬಂದಿಳಿಯಲಿವೆ
ಬೆಂಗಳೂರು : ಒಂಭತ್ತು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಾಮಗಾರಿ ಬರುವ ಫೆಬ್ರವರಿಯಿಂದ ಪ್ರಾರಂಭವಾಗಲಿದ್ದು , ಡಿಸೆಂಬರ್ 2004 ರ ವೇಳೆಗೆ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಲಿದೆ ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಹೇಳಿದ್ದಾರೆ.
ದೇವನಹಳ್ಳಿ ಸಮೀಪದ ಅರಿಶಿನಕುಂಟೆ ಗ್ರಾಮಕ್ಕೆ ಶುಕ್ರವಾರ ಭೇಟಿ ನೀಡಿದ ಕೃಷ್ಣ , ವಿಮಾನ ನಿಲ್ದಾಣ ಕಾಮಗಾರಿಗೆ ಗೊತ್ತು ಪಡಿಸಿರುವ ಸ್ಥಳ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ವೀರಪ್ಪ ಮೊಯಿಲಿ ಅವರ ಕಾಲದಲ್ಲಿಯೇ ವಿಮಾನ ನಿಲ್ದಾಣದ ಯೋಜನೆ ಸಿದ್ಧವಾಗಿತ್ತಾದರೂ, ಆನಂತರದ ಸರ್ಕಾರಗಳು ತೋರಿಸಿದ ಅನಾಸಕ್ತಿಯಿಂದಾಗಿ ಯೋಜನೆ ನೆನೆಗುದಿಗೆ ಬಿತ್ತೆಂದು ಅವರು ವಿಷಾದಿಸಿದರು.
ಖಾಸಗಿ ಪಾಲುದಾರರ ಜಂಟಿ ಸಹಯೋಗದಲ್ಲಿ ನಿರ್ಮಾಣವಾಗುವ ವಿಮಾನ ನಿಲ್ದಾಣ ಕಾಮಗಾರಿಗೆ 1300 ಕೋಟಿ ರುಪಾಯಿ ಖರ್ಚಾಗಲಿದೆ. ನಿರ್ಮಾಣ ವೆಚ್ಚದಲ್ಲಿ ಪ್ರತಿಶತ 13 ರಷ್ಟನ್ನು ರಾಜ್ಯ ಸರ್ಕಾರ ಹಾಗೂ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಭರಿಸಲಿದ್ದು , ಉಳಿದ ಶೇ.77 ರಷ್ಟು ಹಣವನ್ನು ಪಾಲುದಾರರಿಂದ ಸಂಗ್ರಹಿಸಲಾಗುವುದು. ಕಾಮಗಾರಿಯನ್ನು ವಹಿಸಿಕೊಳ್ಳಲು ಈಗಾಗಲೇ 12 ಕಂಪನಿಗಳು ಟೆಂಡರ್ ಸಲ್ಲಿಸಿವೆ. ಸೂಕ್ತವಾದವರಿಗೆ ಕಾಮಗಾರಿ ವಹಿಸಿಕೊಡಲಾಗುವುದು ಎಂದು ಕೃಷ್ಣ ಹೇಳಿದರು.
(ಇನ್ಫೋ ವಾರ್ತೆ)
ವಾರ್ತಾ
ಸಂಚಯ
ಮುಖಪುಟ
/
ಇವತ್ತು...
ಈ
ಹೊತ್ತು...