‘ಬಸವಣ್ಣನ ಹೆಸರಿನಲ್ಲಿ ಮಠಾಧೀಶರು ಸಂಪತ್ತು ಮಾಡುತ್ತಿದ್ದಾರೆ’
ಬೆಂಗಳೂರು : ಬಸವಣ್ಣನವರು ಗುರು ಎಂದು 12ನೇ ಶತಮಾನದ 400 ವಚನಕಾರರೇ ಒಪ್ಪಿದ್ದಾರೆ. ಇಂಥಾದರಲ್ಲಿ ಸಮಾಜದ ಕೆಲವು ಯಥಾಸ್ಥಿತಿವಾದಿಗಳು ಬಸವಣ್ಣ ಗುರು ಅಲ್ಲ, ಕೇವಲ ಭಕ್ತ ಎಂದು ವಿವಾದ ಸೃಷ್ಟಿಸುತ್ತಿದ್ದಾರೆ ಎಂದು ನಿಡುಮಾಮಿಡಿ ಮಠದ ಚನ್ನಮಲ್ಲ ವೀರಭದ್ರ ದೇಶೀಕೇಂದ್ರ ಸ್ವಾಮೀಜಿ ಸಿಡಿ ಮಾತುಗಳನ್ನಾಡಿದ್ದಾರೆ.
ಭಾನುವಾರ ರಾ-ಜಾಜಿನಗರದ ಬಸವ ಸಮಿತಿ ಆಯೋಜಿಸಿದ್ದ 2ನೇ ಶರಣ ಸಾಹಿತ್ಯ ಸಮ್ಮೇಳನದಲ್ಲಿ ಅವರು ಉದ್ಘಾಟನಾ ಭಾಷಣ ಮಾಡುತ್ತಿದ್ದರು. ಸಾಮಾಜಿಕ ಬದಲಾವಣೆಯನ್ನೇ ವಿರೋಧಿಸುವ ಉತ್ತರ ಕರ್ನಾಟಕದ ಕೆಲವರು ಬಸವಣ್ಣ ಗುರು ಅಲ್ಲ, ಯಃಕಶ್ಚಿತ್ ಒಬ್ಬ ಭಕ್ತ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಬಸವಣ್ಣನವರನ್ನೇ ಗುರು ಅಲ್ಲ ಅನ್ನುವುದಾದರೆ, ಜಗತ್ತಿನಲ್ಲಿ ಬೇರಾವ ಗುರುವೂ ಇಲ್ಲ. ಈ ಅಪಪ್ರಚಾರದ ನಡುವೆಯೂ ಅವರನ್ನು ಗುರು ಎಂದು ನಂಬಿರುವ ಲಕ್ಷಾಂತರ ಮಂದಿ ಇದ್ದಾರೆ ಎಂದು ಸ್ವಾಮೀಜಿ ಹೇಳಿದರು.
ಪುರೋಹಿತಶಾಹಿಯನ್ನು ಧಿಕ್ಕರಿಸಿದ ಮೊದಲಿಗ ಬಸವಣ್ಣ. 12ನೆಯ ಶತಮಾನದಲ್ಲಿ ಅವರು ಮಠ ಕಟ್ಟಲಿಲ್ಲ, ಮತೀಯ ಪ್ರಜ್ಞೆಯನ್ನು ವಿರೋಧಿಸಿದರು. ಈಗ ಅವರ ಹೆಸರಿನಲ್ಲೇ ಬಂದವರು ಮಠ ಕಟ್ಟಿದ್ದಾರೆ. ಪುರೋಹಿತಶಾಹಿ ಮತ್ತೆ ತಲೆಯೆತ್ತುವಂತೆ ಮಾಡಿದ್ದಾರೆ. ಬಸವತತ್ವಗಳನ್ನು ಅನುಷ್ಠಾನಕ್ಕೆ ತರುವುದು ಹಾಗಿರಲಿ, ಆ ಆದರ್ಶ ಪುರುಷನ ಹೆಸರನ್ನು ಬಳಸಿ ಸಂಪತ್ತು ಮಾಡಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.
ಸಮ್ಮೇಳನದಲ್ಲಿ ಮಾತನಾಡಿದ ಸಾಹಿತಿ ಗೊ.ರು.ಚನ್ನಬಸಪ್ಪ ನಾಡಿನ ಬೃಹತ್ ಸಂಪತ್ತು ಜಾನಪದ, ಅದನ್ನು ರಕ್ಷಿಸುವ ಅಗತ್ಯವಿದೆ ಎಂದು ಕರೆ ಕೊಟ್ಟರು. ಶಿವಗಂಗೆ ಮೇಲಣ ಗವಿ ಮಠಾಧೀಶರಾದ ಪಟ್ಟದ ಮಲಯ ಶಾಂತಮುನಿ ದೇಶೀಕೇಂದ್ರ ಶಿವಾಚಾರ್ಯ ಸ್ವಾಮಿ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಮ್ಮೇಳನಾಧ್ಯಕ್ಷ ಕೋ.ಚೆನ್ನಬಸಪ್ಪ ಹಾಜರಿದ್ದರು.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications