ಕೇಂದ್ರದ ಕ್ರಮ, ರಾಷ್ಟ್ರ ಪ್ರಗತಿಗೆ ಪೂರಕವೇ ವಿನಾ ಮಾರಕವಲ್ಲ :ಅಟಲ್
ನವದೆಹಲಿ : ಹಸಿದ ಹೊಟ್ಟೆಗೆ ದೊರಕದೆ ರಾಜ್ಯಗಳ ಗೋದಾಮಿನಲ್ಲಿ ದಾಸ್ತಾನಿಟ್ಟಿರುವ 50 ಸಾವಿರ ಕೋಟಿ ರುಪಾಯಿಗೂ ಹೆಚ್ಚು ಮೌಲ್ಯದ ಆಹಾರ ಧಾನ್ಯಗಳನ್ನು ವಿಕೇಂದ್ರೀಕರಣ ವ್ಯವಸ್ಥೆಯ ಮೂಲಕ ವಿತರಿಸುವ ಪ್ರಸ್ತಾವವನ್ನು ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಮುಂದಿಟ್ಟಿದ್ದಾರೆ. ಆದರೆ, ಬಹುತೇಕ ರಾಜ್ಯಗಳ ಮುಖ್ಯಮಂತ್ರಿಗಳು ಕೇಂದ್ರದ ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ.
ವಿಶ್ವ ವ್ಯಾಪಾರ ಸಂಘಟನೆಯ (ಡಬ್ಲ್ಯುಟಿಓ) ಸಾಧಕ - ಭಾದಕಗಳ ಬಗ್ಗೆ ಸಮಾಲೋಚನೆ ನಡೆಸಲು ದೆಹಲಿಯಲ್ಲಿ ಕರೆದಿದ್ದ ಮಹತ್ವದ ಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ಈ ವಿತರಣೆಯನ್ನು ಕೇಂದ್ರೀಕೃತ ಗೊಳಿಸಿದರೆ, ಅನುತ್ಪಾದಕ ವೆಚ್ಚ ಹೆಚ್ಚುತ್ತದೆ. ಈ ನಿಟ್ಟಿನಲ್ಲಿ ಸ್ಥಳೀಯ ಗೋದಾಮುಗಳಲ್ಲಿ ದಾಸ್ತಾನಿರುವ ಧಾನ್ಯ ಸಂಗ್ರಹಣೆಯನ್ನು ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ವಿತರಿಸುವುದೇ ಸೂಕ್ತ ಎಂದರು.
ಈ ವ್ಯವಸ್ಥೆಗೆ ಕೇಂದ್ರ ಅನುದಾನದ ನೆರವು ನೀಡಲಿದೆ ಎಂದ ಅವರು, ಕೇಂದ್ರ ಸರಕಾರ ರೈತರ ಹಿತವನ್ನು ಕಾಪಾಡಲು ಬದ್ಧವಾಗಿದೆ. ಸರಕಾರ ಉದಾರೀಕರಣ ನೀತಿ ಅನುಸರಿಸುವ ಮಾತ್ರಕ್ಕೆ ರೈತರ ಹಿತ ಬಲಿಕೊಡುವುದಿಲ್ಲ. ಸರಕಾರ ಕೈಗೊಂಡಿರುವ ಕ್ರಮಗಳು ದೇಶದ ಪ್ರಗತಿಗೆ ಪೂರಕವಾಗಿವೆಯೇ ವಿನಾ ಮಾರಕವಾಗಿಲ್ಲ ಎಂದು ತಿಳಿಸಿದರು.
ಉದಾರೀಕರಣದಿಂದ ರಾಷ್ಟ್ರದ ಆಯಾತ - ನಿರ್ಯಾತದಲ್ಲಿ ಪ್ರಗತಿ ಸಾಧಿಸಬಹುದು ಎಂದೂ ಅವರು ಅಭಿಪ್ರಾಯಪಟ್ಟರು. ವಿಶ್ವ ವ್ಯಾಪಾರ ಸಂಘಟನೆಯಾಂದಿಗಿನ ಒಪ್ಪಂದದಿಂದ ರಾಷ್ಟ್ರದ ರೈತರಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದೂ ಅವರು ತಿಳಿಸಿದರು.
ಈ ಸಭೆಯಲ್ಲಿ ಪಾಲ್ಗೊಂಡಿದ್ದ ಕರ್ನಾಟಕದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು, ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಒತ್ತಾಯಿಸಿದರು. ಕೈಗಾರಿಕೆ ಹಾಗೂ ಕೃಷಿ ಕ್ಷೇತ್ರಕ್ಕೆ ನೀಡುವ ಅನುದಾನದ ಅಸಮಾನತೆಯನ್ನು ಹೋಗಲಾಡಿಸುವಂತೆ ಸಹ ಅವರು ಆಗ್ರಹಿಸಿದರು. ಸಭೆಯಲ್ಲಿ ರಾಜ್ಯದ ಕೃಷಿ ಸಚಿವ ಟಿ.ಬಿ. ಜಯಚಂದ್ರ ಭಾಗವಹಿಸಿದ್ದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications