ಏಡ್ಸ್ ತಡೆಗೆ ಉಚಿತವಾಗಿರಿಟ್ರೋವೈರಲ್ ನೀಡಿ : ಕೃಷ್ಣ ಒತ್ತಾಯ
ನವದೆಹಲಿ : ಏಡ್ಸ್ ರಿಟ್ರೇವೈರಲ್ ನಾಶಕಾರಿ ಔಷಧಿಯನ್ನು ರಾಜ್ಯಕ್ಕೆ ಉಚಿತವಾಗಿ ಪೂರೈಸಿ, ಬಡಬಗ್ಗರ ಕೈಗೂ ಎಟುಕುವಂತೆ ಮಾಡಬೇಕೆಂದು ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಪ್ರಧಾನಿ ಎ.ಬಿ.ವಾಜಪೇಯಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಆರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಭಾಗವಹಿಸಿ, ಕೃಷ್ಣ ಮಾತನಾಡುತ್ತಿದ್ದರು. ಕರ್ನಾಟಕದಲ್ಲಿ ಸುಮಾರು 3 ಲಕ್ಷ ಏಡ್ಸ್ ರೋಗಿಗಳಿದ್ದಾರೆ. ರೆಟ್ರೋವೈರಲ್ ನಾಶಕಾರಿ ಔಷಧಿಯನ್ನು ಕೆಲವೇ ವೈದ್ಯಕೀಯ ಕಾಲೇಜುಗಳಿಗೆ ಪೂರೈಸಲಾಗುತ್ತಿದೆ. ಜೊತೆಗೆ ಅದು ಬಡಬಗ್ಗರ ಕೈಗೆ ಎಟುಕುತ್ತಿಲ್ಲ. ಎಲ್ಲಾ ಏಡ್ಸ್ ರೋಗಿಗಳಿಗೆ ಈ ಔಷಧಿಯನ್ನು ಉಚಿತವಾಗಿ ನೀಡಲು ಕೇಂದ್ರ ಸರ್ಕಾರ ಮನಸ್ಸು ಮಾಡಬೇಕು ಎಂದು ಆಗ್ರಹಿಸಿದರು.
ಭಾರತದಲ್ಲಿ ಸಿಪ್ಲಾ ಔಷಧಿ ಕಂಪನಿ ಇತರೆ ಬಹುರಾಷ್ಟ್ರೀಯ ಕಂಪನಿಗಳಿಗಿಂತ ಮೂರು ಪಟ್ಟು ಕಡಿಮೆ ದರದಲ್ಲಿ ರೆಟ್ರೋವೈರಲ್ ನಾಶಕಾರಿ ಔಷಧಿಯನ್ನು ಮಾರಾಟ ಮಾಡುತ್ತಿದೆ. ಕರ್ನಾಟಕದಲ್ಲಿ ಪ್ರತಿಶತ 1ರಷ್ಟು ಮಕ್ಕಳು ತಾಯಿಯರಿಂದ ಎಚ್ಐವಿ ಸೋಂಕನ್ನು ಅಂಟಿಸಿಕೊಂಡು ಹುಟ್ಟುತ್ತಿದ್ದಾರೆ. ಇಂಥಾ ತಾಯಂದಿರಿಗಾದರೂ ರಿಟ್ರೋವೈರಲ್ ನಾಶಕಾರಿ ಔಷಧಿ ಕೊಟ್ಟಲ್ಲಿ ಮುಂದೆ ಹುಟ್ಟುವ ಮಕ್ಕಳು ಏಡ್ಸ್ ಮುಕ್ತರಾಗುವಂತೆ ಮಾಡಬಹುದಾಗಿದೆ ಎಂದರು.
ಎಲ್ಲಾ ಜಿಲ್ಲೆಗಳಲ್ಲೂ ರಕ್ತ ಪರೀಕ್ಷಾ ಘಟಕ : ಎಚ್ಐವಿ ಸೋಂಕನ್ನು ಪತ್ತೆ ಹಚ್ಚಲು ಅಗತ್ಯ ರಕ್ತ ಪರೀಕ್ಷೆಗಾಗಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಪರೀಕ್ಷಾ ಘಟಕಗಳನ್ನು ತೆರೆಯಲು ಕೇಂದ್ರ ಸರ್ಕಾರ ಹಣಕಾಸಿನ ನೆರವು ನೀಡಬೇಕು. ಇತ್ತೀಚೆಗೆ ರಾಜ್ಯಕ್ಕೆ ಭೇಟಿ ಕೊಟ್ಟ ವಿಶ್ವಬ್ಯಾಂಕ್ ಅಧ್ಯಕ್ಷರೂ ಏಡ್ಸ್ ನಿರ್ಮೂಲನೆಗೆ ಒಲವು ತೋರಿದ್ದು, ಕೇಂದ್ರ ಮನಸ್ಸು ಮಾಡಿದಲ್ಲಿ ವಿಶ್ವಬ್ಯಾಂಕ್ ನೆರವನ್ನೂ ಪಡೆಯಬಹುದು. ರಾಜ್ಯದಲ್ಲಿ ಕೇವಲ 5 ಜಿಲ್ಲೆಗಳಲ್ಲಿ ಮಾತ್ರ ರಕ್ತ ಪರೀಕ್ಷಾ ಘಟಕಗಳಿವೆ ಎಂದು ಕೃಷ್ಣ ವಿವರಿಸಿದರು.
ಆಂಧ್ರಪ್ರದೇಶ, ತಮಿಳುನಾಡು, ಮಹಾರಾಷ್ಟ್ರ, ಮಣಿಪುರ ಮತ್ತು ನಾಗಾಲ್ಯಾಂಡ್ ರಾಜ್ಯಗಳ ಮುಖ್ಯಮಂತ್ರಿಗಳೂ ಸಭೆಯಲ್ಲಿ ಭಾಗವಹಿಸಿದ್ದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications