ಆರ್ಟಿಪಿಎಸ್ ಆವರಣದಲ್ಲಿ ಬೆಂಕಿ, ಪರಿವರ್ತಕ ಭಸ್ಮ
ರಾಯಚೂರು : ಇಲ್ಲಿನ ಶಕ್ತಿನಗರದ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಹಿಂಭಾಗದ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ 10.30ಕ್ಕೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕೇಂದ್ರದ 220 ಕೆ.ವಿ. ಮತ್ತು 400 ಕೆ.ವಿ. ವಿದ್ಯುತ್ ಪರಿವರ್ತಕದ ಕೆಲ ಭಾಗಗಳು ಹಾನಿಗೊಳಗಾಗಿವೆ.
ಆವರಣದ 50 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ನೀಲಗಿರಿ ಗಿಡಗಳು ಸುಟ್ಟುಹೋಗಿವೆ. ಬೆಂಕಿ ಉರಿಯ ಪ್ರಭಾವ ತೀವ್ರವಾಗಿದ್ದ ಕಾರಣ ವಿದ್ಯುದುತ್ಪಾದನೆಯನ್ನು ತಕ್ಷಣವೇ ಸ್ಥಗಿತಗೊಳಿಸಲಾಯಿತು. ಸಿಬ್ಬಂದಿಯೆಲ್ಲಾ ಬೆಂಕಿ ಆರಿಸುವ ಕಾರ್ಯದಲ್ಲಿ ನಿರತರಾದರು. ವಿದ್ಯುತ್ ಸರಬರಾಜು ವಾಹಕದ ‘ಬಸ್’, ವಿದ್ಯುತ್ ನಿಯಂತ್ರಕವೂ ಸುಟ್ಟಿದೆ. ಕೇಂದ್ರದ 4 ವಾಹನಗಳು ಹಾಗೂ ರಾಯಚೂರು ಅಗ್ನಿಶಾಮಕ ದಳದ 2 ವಾಹನಗಳು 5 ತಾಸು ಹೆಣಗಾಡಿ ಬೆಂಕಿ ನಂದಿಸಿದವು. ಮಧ್ಯಾಹ್ನ ಸುಮಾರು 3ಗಂಟೆಯವರೆಗೆ ಬೆಂಕಿ ಆರಿಸುವ ಕೆಲಸ ನಡೆಯಿತು.
ನಂತರ 2 ಘಟಕಗಳಲ್ಲಿ ವಿದ್ಯುತ್ ಉತ್ಪಾದನೆಯನ್ನು ಪುನಃ ಶುರುಮಾಡಲಾಯಿತು. ಸೇಡಂ, ಮುನಿರಾಬಾದ್, ದಾವಣಗೆರೆ ವಿಭಾಗಕ್ಕೆ ಈ ಅಪಘಾತದ ಕಾರಣ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿತ್ತು. ಸುಟ್ಟಿರುವ ಪರಿವರ್ತಕ ಇನ್ನಿತರ ಬಿಡಿಭಾಗಗಳಿಂದ ಸುಮಾರು 1.5 ಲಕ್ಷ ರುಪಾಯಿ ನಷ್ಟ ಸಂಭವಿಸಿದೆ. ಬಿಡಿಭಾಗಗಳ ಜೋಡಣೆ ಕಾರ್ಯ ಬುಧವಾರ ಮಾಡಲಾಗುತ್ತದೆ ಎಂದು ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ಹತ್ತಲು ಏನು ಕಾರಣ ಎಂಬುದು ಇನ್ನೂ ತಿಳಿದುಬಂದಿಲ್ಲ.
ಅನಿಯಮಿತ ವಿದ್ಯುತ್ ನಿಲುಗಡೆ : ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ 5 ಘಟಕಗಳಲ್ಲಿ , ಕೈಗಾದ ಒಂದು ಘಟಕದಲ್ಲಿ ಹಾಗೂ ನೈವೇಲಿಯಲ್ಲಿ ವಿದ್ಯುತ್ ಉತ್ಪಾದನೆ ಪೂರ್ಣ ಸ್ಥಗಿತಗೊಂಡಿರುವುದರಂದ ಬೆಂಗಳೂರು ನಗರವೂ ಸೇರಿದಂತೆ ರಾಜ್ಯದಲ್ಲಿ ಅನಿಯಮಿತ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಪ್ರಕಟಣೆ ಹೊರಡಿಸಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications