ಚಂಡಮಾರುತ ತಂದ ಮಳೆಗೆ ಕೊಡಗಿನ ಮಹಿಳೆಯ ಬಲಿ
ಬೆಂಗಳೂರು : ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ವಾಯುಭಾರ ಕುಸಿತದಿಂದಾಗಿ ಕರಾವಳಿ ಪ್ರದೇಶದಲ್ಲಿ ಬುಧವಾರ ಧಾರಾಕಾರವಾಗಿ ಮಳೆ ಸುರಿದಿದ್ದು, ಕೊಡಗಿನಲ್ಲಿ ಸಿಡಿಲು ಬಡಿದು ಮಹಿಳೆಯಾಬ್ಬಳು ಮೃತ ಪಟ್ಟಿದ್ದಾರೆ.
ಮಂಗಳೂರಿನಲ್ಲಿ ಜನರು ಚಂಡಮಾರುತ ಅಪ್ಪಳಿಸುವ ಭೀತಿಯಲ್ಲಿದ್ದರೂ ಬುಧವಾರ ಸಂಜೆಯವರೆಗೆ ಬಿರುಗಾಳಿಯ ಮುನ್ಸೂಚನೆಯೇನೂ ಕಂಡು ಬರಲಿಲ್ಲ. ಆದರೆ ರಾತ್ರಿ, ಮಳೆ ಧಾರಾಕಾರವಾಗಿ ಸುರಿಯಲಾರಂಭಿಸಿತ್ತು. ಕರ್ನಾಟಕದ ಕರಾವಳಿಯಲ್ಲಿಯೇ ಅತಿ ಹೆಚ್ಚು ಮಳೆ ಮಂಗಳೂರು ವಿಮಾನ ನಿಲ್ದಾಣ, ಬಜ್ಪೆಯಲ್ಲಿ (41.6 ಮಿಮೀ) ಬಿದ್ದಿರುವ ವರದಿಯಾಗಿದೆ. ಬಂಟ್ವಾಳ (39.8), ಪುತ್ತೂರು (18.6), ಬೆಳ್ತಂಗಡಿ ( 10.8) ಮಿಲಿಮೀಟರ್ ಮಳೆ ಬಿದ್ದಿದೆ. ಕನಿಷ್ಠ ಮಳೆ ಕಂಡ ಪ್ರದೇಶ ಸುಳ್ಯ( 1ಮಿಮೀ). ಮುಂದಿನ 24 ಗಂಟೆಗಳ ಅವಧಿಯಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದ್ದು ಸಮುದ್ರಕ್ಕಿಳಿಯದಂತೆ ಜಿಲ್ಲಾಧಿಕಾರಿಗಳು ಮೀನುಗಾರರಿಗೆ ಸೂಚಿಸಿದ್ದಾರೆ.
ಕಾಸರಗೋಡು ಮತ್ತು ಉಡುಪಿ ಜಿಲ್ಲೆಗಳಲ್ಲಿಯೂ ವ್ಯಾಪಕ ಮಳೆಯಾಗುತ್ತಿದೆ. ಕೊಡಗಿನ ಕಾವೇರಿ ಜಲಾನಯನ ಪ್ರದೇಶದಲ್ಲಿ ಬುಧವಾರದಿಂದ ಸುರಿಯುತ್ತಿರುವ ಮಳೆ ಗುರುವಾರ ಬೆಳಗ್ಗೆ ಮತ್ತಷ್ಟು ತೀವ್ರವಾಗಿದೆ.
ಶರಾವತಿ ಜಲಾನಯನ ಪ್ರದೇಶದಲ್ಲಿ ರೆಚ್ಚೆ ಹಿಡಿದು ಸುರಿಯುತ್ತಿರುವ ಮಳೆಯಿಂದಾಗಿ ಭತ್ತದ ಕೊಯ್ಲಿಗೆ ತೀವ್ರ ತೊಂದರೆಯಾಗಿದೆ. ಕರೂರು ಬಾರಂಗಿ ಪ್ರದೇಶಗಳಲ್ಲಿ ಬುಧವಾರ ಭಾರೀ ಬಿರುಗಾಳಿ ಕಾಣಿಸಿಕೊಂಡಿತ್ತು. ಆದರೆ ಯಾವುದೇ ಹಾನಿಯಾದ ವರದಿಯಾಗಿಲ್ಲ.
ಪಾವಿನಕುರ್ವಾ ಗ್ರಾಮದ ನಿವಾಸಿಗಳ ಸ್ಥಳಾಂತರ
ಕಾರವಾರದಲ್ಲಿ ಚಂಡ ಮಾರುತ ಅಪ್ಪಳಿಸುವ ಭೀತಿಯ ಹಿನ್ನೆಲೆಯಲ್ಲಿ ಪಾವಿನಕುರ್ವಾ ಗ್ರಾಮದ ನಿವಾಸಿಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಇಲ್ಲಿನ ಸುಮಾರು 120 ಕುಟುಂಬಗಳನ್ನು ಕರ್ಕಿಯ ಚೆನ್ನಕೇಶವ ಪ್ರೌಢಶಾಲೆ ಮತ್ತು ದೈವಜ್ಞ ಕಲ್ಯಾಣಂಟಪದಲ್ಲಿ ಇರಿಸಲಾಗಿದೆ.
ಪ್ರಸ್ತುತ ಚಂಡಮಾರುತವು ಕರ್ನಾಟಕದ ಕರಾವಳಿಯನ್ನು ಅಪ್ಪಳಿಸುವ ಸಾಧ್ಯತೆ ಬಹಳ ಕಡಿಮೆಯಾಗಿದೆ. ಆದರೆ ಗೋವಾದಿಂದ ಸುಮಾರು 300 ಕಿಮೀ ವೇಗದಲ್ಲಿ ನೈರುತ್ಯ ದಿಕ್ಕಿನತ್ತ ಚಲಿಸುತ್ತಿರುವ ಬಿರುಗಾಳಿ ಮತ್ತಷ್ಟು ತೀವ್ರಗೊಳ್ಳುವ ಸಂಭವವಿದೆ. ಇದು ಗುರುವಾರ ಮಧ್ಯಾಹ್ನದ ಹೊತ್ತಿಗೆ ಮಹಾರಾಷ್ಟ್ರದ ದೇವಘಡ ಮತ್ತು ಅಲಿಬಾಗ್ ಕರಾವಳಿಯನ್ನು ದಾಟಲಿದ್ದು, ಗುಜರಾತಿನ ದಕ್ಷಿಣ ಭಾಗದ ಮೇಲೆ ಅಪ್ಪಳಿಸುವ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications