ತಿರುಪತಿಯಲ್ಲಿ ವಸತಿ ಸೌಲಭ್ಯಕ್ಕೆ ಕನ್ನಡ ಭವನ ನಿರ್ಮಾಣ ನಿರ್ಧಾರ
ಬೆಂಗಳೂರು : ಕರ್ನಾಟಕದಿಂದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುವ ಯಾತ್ರಾರ್ಥಿಗಳಿಗೆ ವಸತಿ ಸೌಲಭ್ಯವನ್ನು ಕಲ್ಪಿಸಲು ರಾಜ್ಯ ಪ್ರವಾಸೋದ್ಯಮ ಸಚಿವಾಲಯ ನಿರ್ಧರಿಸಿದೆ. ತಿರುಪತಿಯಲ್ಲಿ ಕನ್ನಡ ಭವನವನ್ನು ನಿರ್ಮಿಸಲು ಸ್ಥಳಾವಕಾಶ ನೀಡುವಂತೆ ಆಂಧ್ರಪ್ರದೇಶ ಮುಖ್ಯಮಂತ್ರಿಗಳಿಗೆ ರಾಜ್ಯ ಮನವಿ ಮಾಡಿದೆ.
ಈ ವಿಷಯವನ್ನು ರಾಜ್ಯ ಪ್ರವಾಸೋದ್ಯಮ ಸಚಿವ ಆರ್. ರೋಷನ್ಬೇಗ್ ತಿಳಿಸಿದ್ದಾರೆ. ತಿರುಪತಿಯಲ್ಲಿ ವಸತಿ ಸೌಲಭ್ಯ ಸೀಮಿತವಾಗಿದ್ದು, ರಾಜ್ಯದಿಂದ ತಿರುಪತಿಗೆ ಹೋಗುವ ಭಕ್ತಾದಿಗಳು ವಸತಿಗಾಗಿ ಪರದಾಟುತ್ತಿದ್ದಾರೆ. ಇದನ್ನು ತಪ್ಪಿಸಲು ವಸತಿ ಸೌಲಭ್ಯ ಕಲ್ಪಿಸಲು ರಾಜ್ಯ ನಿರ್ಧರಿಸಿದೆ. ಆಂಧ್ರ ಸರಕಾರ ನಿವೇಶನ ನೀಡಿದ ಕೂಡಲೇ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭಿಸಲಾಗುವುದು ಎಂದು ಅವರು ಹೇಳಿದರು.
ಮಂಗಳವಾರ ನವದೆಹಲಿಯಲ್ಲಿ ಚಂದ್ರಬಾಬು ನಾಯ್ದು ಅವರನ್ನು ಭೇಟಿ ಮಾಡಿದ ಬೇಗ್ ಅವರು, ಕರ್ನಾಟಕದ ಈ ಬೇಡಿಕೆಯನ್ನು ತ್ವರಿತಗತಿಯಲ್ಲಿ ಪೂರೈಸುವಂತೆ ಮನವಿ ಮಾಡಿದ್ದಾರೆ. ಹಾಲಿ ತಿರುಪತಿಯಲ್ಲಿರುವ ಛತ್ರ ಮುಜರಾಯಿ ಇಲಾಖೆ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿ ಇಲಾಖೆಯ ಜಂಟಿ ನಿರ್ವಹಣೆಯಲ್ಲಿದ್ದು, ಅಲ್ಲಿನ ಸೌಲಭ್ಯಗಳು ಸೀಮಿತವಾಗಿವೆ. ಯಾತ್ರಾರ್ಥಿಗಳಿಗೆ ಹೆಚ್ಚಿನ ಅನುಕೂಲ ಕಲ್ಪಿಸುವ ಸಲುವಾಗಿ ಈ ಮನವಿ ಮಾಡಲಾಗಿದೆ ಎಂದೂ ಅವರು ತಿಳಿಸಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications