ಸಿಪ್ಪೆ ಸಹಿತ ಗೇರುಬೀಜಕ್ಕೆ ಮಾರುಕಟ್ಟೆ ಶುಲ್ಕ ವಿನಾಯಿತಿ
ಬೆಂಗಳೂರು : ರಫ್ತು ಮಾಡುವ ಸಿಪ್ಪೆ ಸಹಿತ ಗೇರುಬೀಜದ ಮೇಲೆ ವಿಧಿಸಲಾಗುತ್ತಿದ್ದ ಮಾರುಕಟ್ಟೆ ಶುಲ್ಕಕ್ಕೆ ವಿನಾಯಿತಿ ನೀಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.
ಈ ವಿಷಯವನ್ನು ವಾರ್ತಾ ಸಚಿವ ಬಿ.ಕೆ. ಚಂದ್ರಶೇಖರ್ ಸುದ್ದಿಗಾರರಿಗೆ ಶುಕ್ರವಾರ ತಿಳಿಸಿದರು. ವಿಶ್ವ ವ್ಯಾಪಾರ ಸಂಘಟನೆ ಒಪ್ಪಂದದ ನಂತರ ಮಾರುಕಟ್ಟೆಯಲ್ಲಿ ಈ ಸರಕಿನ ಬೆಲೆ ಕುಸಿಯುವ ಸಾಧ್ಯತೆ ಇರುವುದರಿಂದ ಗೇರುಬೀಜ ಬೆಳೆಗಾರರಿಗೆ ತೀರಾ ತೊಂದರೆಯಾಗದಂತೆ ಮುನ್ನೆಚ್ಚರಿಕೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದರು.
ಸುಮಾರು 25 ಸಾವಿರಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು ಈ ಉದ್ಯಮದಲ್ಲಿ ತೊಡಗಿದ್ದಾರೆ. ಈ ಉದ್ಯಮ ಲಾಭದಾಯಕವಾಗಿ ಮುಂದುವರೆಯುವಂತೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದ ಚಂದ್ರಶೇಖರ್, ವಾರ್ಷಿಕ 300 ಕೋಟಿ ರೂಪಾಯಿ ವಿದೇಶೀ ವಿನಿಮಯ ಗಳಿಸುತ್ತಿರುವ ಈ ಉದ್ಯಮದ ಒಟ್ಟು ಉತ್ಪಾದನೆಯಲ್ಲಿ ಶೇ 28ರಷ್ಟು ರಫ್ತು ಮಾಡಲಾಗುತ್ತಿದೆ ಎಂದು ವಿವರಿಸಿದರು.
(ಇನ್ಫೋ ವಾರ್ತೆ)
ವಾರ್ತಾ
ಸಂಚಯ
ಮುಖಪುಟ
/
ಇವತ್ತು...
ಈ
ಹೊತ್ತು...