ಮತ್ತೆ ಚಿಗುರಿದ ಹರಿಹರ ಕಿರ್ಲೋಸ್ಕರ್ ಪುನಾರಂಭದ ಕನಸು
ದಾವಣಗೆರೆ : ಆರ್ಥಿಕ ಮುಗ್ಗಟ್ಟಿನ ಕಾರಣದ ಮೇಲೆ ಜನವರಿ 1ನೇ ತಾರೀಖಿನಿಂದ ಬೀಗಮುದ್ರೆ ಘೋಷಿಸಿರುವ ಹರಿಹರದ ಮೈಸೂರು ಕಿರ್ಲೋಸ್ಕರ್ ಕಾರ್ಖಾನೆಯನ್ನು ಪುನಾರಂಭಿಸುವ ಪ್ರಯತ್ನಕ್ಕೆ ಚಾಲನೆ ದೊರೆತಿದೆ. ಈ ಕಾರ್ಖಾನೆಯ ನೈಜ ಸ್ಥಿತಿಗತಿಯ ಅಧ್ಯಯನಕ್ಕೆ ಸಮಿತಿಯನ್ನು ಕಳುಹಿಸಲು ಆಡಳಿತ ಮಂಡಳಿ ಅನುಮತಿ ನೀಡಿದೆ.
ಬುಧವಾರ ಬೆಂಗಳೂರಿನಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಶ್ಯಾಂ ಕಿರ್ಲೋಸ್ಕರ್ ಮತ್ತು ಅತುಲ್ ಕಿರ್ಲೋಸ್ಕರ್ ಅವರು ಔಪಚಾರಿಕವಾಗಿ ಅಧ್ಯಯನ ಸಮಿತಿಯ ಆಗಮನಕ್ಕೆ ಹಸಿರು ನಿಶಾನೆ ತೋರಿದ್ದಾರೆ ಎಂದು ತಿಳಿದುಬಂದಿದೆ. ಅಧ್ಯಯನ ತಂಡ ಬಹುತೇಕ ಸೋಮವಾರ ಕಾರ್ಖಾನೆಗೆ ಭೇಟಿ ನೀಡಲಿದ್ದು, ಮೇ 30ರೊಳಗೆ ವರದಿ ನೀಡಲಿದೆ.
ಕಾರ್ಖಾನೆಯ ಪುನಾರಂಭಕ್ಕಾಗಿ ಬೃಹತ್ ಕೈಗಾರಿಕೆ ಸಚಿವ ಆರ್.ವಿ. ದೇಶಪಾಂಡೆ ಅವರ ಕಚೇರಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್, ಹಿಂಡಸಗೇರಿ, ಜಿಲ್ಲಾಧಿಕಾರಿ ಕೆ. ಶಿವರಾಮು, ಕಾರ್ಮಿಕ ಸಂಘಟನೆಯ ಮುಖಂಡರು ಹಾಗೂ ಆಡಳಿತ ಮಂಡಳಿಯ ವರಿಷ್ಠರು ಪಾಲ್ಗೊಂಡಿದ್ದರು.
ಸಭೆಯಲ್ಲಿ ಕಾರ್ಮಿಕ ಮುಖಂಡರ ಒತ್ತಡಕ್ಕೆ ಮಣಿದ ಆಡಳಿತ ಮಂಡಳಿ ಅಧ್ಯಯನ ತಂಡ ಕಾರ್ಖಾನೆಗೆ ಭೇಟಿ ನೀಡಲು ಸಮ್ಮತಿಸಿದೆ. ಸಮಿತಿ ವರದಿ ನೀಡಿದ ಬಳಿಕ ಕಾರ್ಖಾನೆಯ ಪುನಾರಂಭದ ಹಣೆಬರಹ ತಿಳಿಯಲಿದೆ. ಈ ಮಧ್ಯೆ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಕಾರ್ಖಾನೆಯ ಪುನಾರಂಭ ಕಷ್ಟ. ಕಾರ್ಮಿಕರ ಸಂಖ್ಯೆಯನ್ನು ಕಡಿತಗೊಳಿಸಿದರೆ ಮತ್ತು ಹಣಕಾಸು ಸಂಸ್ಥೆಗಳು ಸಾಲ ನೀಡಲು ಒಪ್ಪಿದರೆ ಮಾತ್ರ ಪುನಾರಂಭದ ಯೋಚನೆ ಮಾಡಬಹುದು ಎಂದು ಆಡಳಿತ ಮಂಡಳಿ ಹೇಳಿದೆ ಎಂದು ಗೊತ್ತಾಗಿದೆ.
ಬಂಡವಾಳಶಾಹಿಗಳ ಒತ್ತಡಕ್ಕೆ ಮಣಿದು, ಕಾರ್ಮಿಕ ಹಿತ ಬಲಿಕೊಡದಂತೆ ಕಾರ್ಮಿಕ ನಾಯಕರು ಆಗ್ರಹಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications