12 ವರ್ಷಗಳ ನಂತರ ಪಾಕಿಸ್ತಾನದಲ್ಲಿಭಾರತ- ಪಾಕ್ ಟೆಸ್ಟ್!
ನವದೆಹಲಿ : ಆಸ್ಟ್ರೇಲಿಯಾದ ಒಳಾಂಗಣ ಮೈದಾನದಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ಕ್ರಿಕೆಟ್ ಆಡಲು ಒಪ್ಪಿದ್ದ ಭಾರತ ಈಗ ತನ್ನ ಇರಾದೆ ಬದಲಿಸಿದ್ದು, ಅದೇ ತಿಂಗಳಲ್ಲಿ ಪಾಕಿಸ್ತಾನದ ನೆಲದಲ್ಲಿ 12 ವರ್ಷಗಳ ದೀರ್ಘವಿರಾಮದ ನಂತರ ಮೊದಲ ಟೆಸ್ಟ್ ಪಂದ್ಯ ಆಡಲಿದೆ ! ಬಿಸಿಸಿಐ ಕಾರ್ಯದರ್ಶಿ ಜಯವಂತ ಲೆಲೆ ಸೋಮವಾರ ಈ ವಿಷಯ ತಿಳಿಸಿದ್ದಾರೆ.
ಸ್ಟೀವ್ ವಾ ನೇತೃತ್ವದ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ತಂಡದ ವಿರುದ್ಧ ಮೆಲ್ಬೋರ್ನ್ನ ಕೊಲೋನಿಯಲ್ ಒಳಾಂಗಣ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 10ರಿಂದ 16ರವರೆಗೆ ಕ್ರಿಕೆಟ್ ಆಡಲು ಬಂದಿದ್ದ ಬುಲಾವಿಗೆ ಭಾರತ ಒಪ್ಪಿತ್ತು. ಸೆಪ್ಟೆಂಬರ್ 13ರಿಂದ 17ರವರೆಗೆ ಏಷ್ಯನ್ ಟೆಸ್ಟ್ ಚಾಂಪಿಯನ್ಷಿಪ್ ಪಂದ್ಯ ಆಡಲು ಉಭಯ ರಾಷ್ಟ್ರಗಳೂ ಕಳೆದ ವಾರ ಲಾಹೋರಿನಲ್ಲಿ ಒಪ್ಪಿಗೆ ಸೂಚಿಸಿವೆ !
ಆಸ್ಟ್ರೇಲಿಯಾದಲ್ಲಿ ಒಂದು ದಿನದ ಸರಣಿ ಆಡುವುದಕ್ಕಿಂತ ಪಾಕ್ ವಿರುದ್ಧ ಟೆಸ್ಟ್ ಪಂದ್ಯ ಆಡುವುದೇ ನಮ್ಮ ಆಯ್ಕೆ. ಒಳಾಂಗಣ ಕ್ರಿಕೆಟ್ ಆಡಲು ಆಸ್ಟ್ರೇಲಿಯಾಕ್ಕೆ ಬರುತ್ತಿಲ್ಲ ಎಂದು ಸದ್ಯದಲ್ಲೇ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಗೆ ಪತ್ರ ಬರೆಯುತ್ತೇನೆ ಎಂದು ಜಯವಂತ ಲೆಲೆ ಎಎಫ್ಪಿಗೆ ತಿಳಿಸಿದ್ದಾರೆ.
ಕಳೆದ ವರ್ಷ ಕೊಲೋನಿಯಲ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಒಳಾಂಗಣ ಕ್ರಿಕೆಟ್ ಪಂದ್ಯ ನಡೆದಿತ್ತು. ಆಸ್ಟ್ರೇಲಿಯಾವನ್ನು ದಕ್ಷಿಣ ಆಫ್ರಿಕ ತಂಡ ಎದುರಿಸಿತ್ತು. ಈಚೆಗೆ ತಾನೆ ಭಾರತ ಪ್ರವಾಸ ಮುಗಿಸಿಕೊಂಡು ಹೋದ ಆಸ್ಟ್ರೇಲಿಯಾ, ಒಳಾಂಗಣ ಕ್ರಿಕೆಟ್ ಆಡಲು ಭಾರತಕ್ಕೆ ಬುಲಾವು ನೀಡಿತ್ತು. ಭಾರತ ಕೂಡ ಅದಕ್ಕೆ ಒಪ್ಪಿಗೆ ಸೂಚಿಸಿತ್ತು.
1989ರ ನಂತರ ಇದೇ ಮೊದಲ ಬಾರಿಗೆ ಭಾರತ, ಪಾಕಿಸ್ತಾನದ ನೆಲದಲ್ಲಿ ಟೆಸ್ಟ್ ಕ್ರಿಕೆಟ್ ಆಡಲು ಒಪ್ಪಿಗೆ ಸೂಚಿಸಿದೆ ಎಂದು ಕಳೆದ ವಾರ ಏಷ್ಯನ್ ಕ್ರಿಕೆಟರ್ಸ್ನ ಮುಖ್ಯಸ್ಥರು ಹೇಳಿದ್ದರು. ಭಾರತದ ಈ ನಿರ್ಧಾರದಿಂದಾಗಿ 2 ವರ್ಷಗಳಿಂದ ಪಾಕಿಸ್ತಾನದೊಟ್ಟಿಗೆ ಹಳಸಿಕೊಂಡಿರುವ ಭಾರತದ ಕ್ರಿಕೆಟ್ ಸಂಬಂಧ ಉತ್ತಮವಾಗುವ ನಿರೀಕ್ಷೆಯಿದೆ.
ವಿವಿಧ ರಾಷ್ಟ್ರಗಳು ಪಾಲ್ಗೊಳ್ಳುವ ಟೂರ್ನಿಗಳಲ್ಲಿ ಮಾತ್ರ ಪಾಕಿಸ್ತಾನದ ವಿರುದ್ಧ ಭಾರತ ಆಡಬಹುದು ಎಂದು ಭಾರತ ಸರ್ಕಾರ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು. ಪಾಕಿಸ್ತಾನದ ವಿರುದ್ಧ ಭಾರತದ ಸೆಣಸು ಬಹುಶಃ ಕರಾಚಿಯಲ್ಲಿ ನಡೆಯಲಿದೆ.
(ಎಎಫ್ಪಿ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications