ಕನ್ನಡದಲ್ಲಿ ಜೀವನ ವಿಜ್ಞಾನ ಪುಸ್ತಕ ಮಾಲೆ ಪ್ರಕಟಣೆ
ಬೆಂಗಳೂರು: ವಿದ್ಯಾರ್ಥಿಗಳ ವೈಯಕ್ತಿಕ ವ್ಯಕ್ತಿತ್ವದ ವಿಕಸನಕ್ಕೆ ನೆರವಾಗುವ ಜೀವನ ವಿಜ್ಞಾನ ಪುಸ್ತಕ ಮಾಲೆಯ ಕನ್ನಡ ಆವೃತ್ತಿ ಬಿಡುಗಡೆಗೆ ಸಿದ್ಧವಾಗಿದೆ. ಆಚಾರ್ಯ ಮಹಾಪ್ರಾಯ ಎಜುಕೇಷನ್ ಟ್ರಸ್ಟ್ ಹಿಂದಿ ಮತ್ತು ಇಂಗ್ಲಿಷ್ನಲ್ಲಿ ಪ್ರಕಟಿಸಿರುವ ಈ ಪುಸ್ತಕ ಮಾಲೆಯನ್ನು ಶ್ರೀ ಆದಿಚುಂಚನಗಿರಿ ಮಠದ ಬಾಲ ಗಂಗಾಧರ ನಾಥ ಸ್ವಾಮಿಗಳ ಒತ್ತಾಸೆಯ ಮೇಲೆ ಕನ್ನಡಕ್ಕೆ ಅನುವಾದಿಸಲಾಗಿದೆ.
ಈ ಪುಸ್ತಕ ಮಾಲೆಯನ್ನು ಜೂನ್ 1ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಬಿಡುಗಡೆ ಮಾಡುವರು ಮಹಾಪ್ರಾಯ ಎಜುಕೇಷನ್ ಟ್ರಸ್ಟ್ನ ಆಡಳಿತ ಮಂಡಳಿ ಸದಸ್ಯ ಲಲಿತ್ ಜೈನ್ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ಜೀವನ ವಿಜ್ಞಾನ ಪುಸ್ತಕ ಮಾಲೆಯಲ್ಲಿ ಒಟ್ಟು 12 ಪುಸ್ತಕಗಳಿವೆ. 1ರಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಈ ಪುಸ್ತಕಗಳು ಉಪಯುಕ್ತವಾಗಿವೆ. ಉತ್ತರ ಭಾರತದ ನಾಲ್ಕು ರಾಜ್ಯಗಳಲ್ಲಿ ಇದನ್ನು ಪಠ್ಯವೆಂದೂ ಪರಿಗಣಿಸಿದ್ದಾರೆ ಎಂದೂಅವರು ಹೇಳಿದರು.
ಒಂದೊಂದು ಪುಸ್ತಕದ ಮುಖಬೆಲೆ 20 ರುಪಾಯಿಗಳಾಗಿದ್ದು, ಕೊಳ್ಳಬಯಸುವ ಸಾರ್ವಜನಿಕರಿಗೆ ಶೇ.50ರ ರಿಯಾಯಿತಿಯಲ್ಲಿ ಪುಸ್ತಕ ದೊರಯಲಿದೆ ಎಂದ ಅವರು, ಆದಿಚುಂಚನಗಿರಿ ಮಠದ ಶಾಲೆಗಳಲ್ಲಿ ಪಠ್ಯದ ಜತೆಗೆ ಈ ಪುಸ್ತಕ ಮಾಲೆಯ ವಿಷಯಗಳನ್ನೂ ಭೋದಿಸಲಾಗುತ್ತದೆ ಎಂದರು.
ಸನ್ಮಾನ : ಪುಸ್ತಕ ಬಿಡುಗಡೆಯ ಸಮಾರಂಭದಲ್ಲಿ ಓಸ್ವಾಲ್ ಪರಿಷತ್ ವತಿಯಿಂದ ಆದಿ ಚುಂಚನಗಿರಿಯ ಶ್ರೀ ಬಾಲಗಂಗಾಧರನಾಥ ಸ್ವಾಮಿಗಳಿಗೆ ವಿದ್ಯಾ ಸಾಮ್ರಾಟ್ ಎಂಬ ಗೌರವ ನೀಡಿ ಸನ್ಮಾನಿಸಲಾಗುವುದು ಎಂದೂ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಚುಂಚನಗಿರಿ ಮಠದ ಸೌಮ್ಯನಾಥ ಸ್ವಾಮಿಗಳು ಭಾಗವಹಿಸಿದ್ದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications