Get Updates
Get notified of breaking news, exclusive insights, and must-see stories!

ವಾಯು ಮಾಲಿನ್ಯ 7600 ವಾಹನ ಚಾಲಕರ ವಿರುದ್ಧ ಕೇಸು ದಾಖಲು

ಬೆಂಗಳೂರು : ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಹಾಗೂ ಶಬ್ದ ಮಾಲಿನ್ಯ ಹೆಚ್ಚುತ್ತಿದೆ. ಕಲಬೆರಕೆ ಪೆಟ್ರೋಲ್‌ ಬಳಕೆಯೂ ಇದಕ್ಕೆ ಕಾರಣ ಎಂಬುದು ಸರಕಾರದ ಗಮನಕ್ಕೂ ಬಂದಿದೆ. ಕೆಲವು ಪೆಟ್ರೋಲ್‌ ಬಂಕ್‌ಗಳ ವಿರುದ್ಧ ಮೊಕದ್ದಮೆ ಹೂಡಲಾಗಿದೆ. ಒಂದೆರೆಡು ಪೆಟ್ರೋಲ್‌ ಬಂಕ್‌ಗಳನ್ನೂ ಮುಚ್ಚಲಾಗಿದೆ. ವಾಯು ಮಾಲಿನ್ಯ ನಿಯಂತ್ರಣಕ್ಕೆ ವಿಶೇಷ ಕಾರ್ಯಪಡೆಯನ್ನೂ ರಚಿಸಲಾಗಿದೆ.

ಈ ಮಧ್ಯೆ ಕೇವಲ ಒಂದು ವಾರದ ಅವಧಿಯಲ್ಲಿ ಶಬ್ದ ಹಾಗೂ ವಾಯು ಮಾಲಿನ್ಯ ಉಂಟು ಮಾಡುತ್ತಿದ್ದ ವಾಹನ ಚಾಲಕರ ವಿರುದ್ಧ 7,600 ಪ್ರಕರಣಗಳನ್ನು ಬೆಂಗಳೂರು ಸಂಚಾರಿ ವಿಭಾಗದ ಪೊಲೀಸರು ದಾಖಲಿಸಿಕೊಂಡಿದ್ದಾರೆ. ಮೇ 20ರಿಂದ 26ರ ಅವಧಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ಸಂಚಾರಿ ಪೊಲೀಸರು ವಾಯು ಮಾಲಿನ್ಯ ಉಂಟು ಮಾಡುತ್ತಿದ್ದ 1,282 ಹಾಗೂ ಶಬ್ದ ಮಾಲಿನ್ಯ ಉಂಟು ಮಾಡುತ್ತಿದ್ದ 2,815 ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದೋಷ ಪೂರಿತ ಸೈಲೆನ್ಸರ್‌ ಅಳವಡಿಸಿದ್ದ 2,947 ಜನರ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್‌ ಪ್ರಕಟಣೆ ತಿಳಿಸಿದೆ.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+