ಹೆಸರಾಂತ ಮಕ್ಕಳ ಸಾಹಿತಿ ಸಿಸು ಸಂಗಮೇಶ ಇನ್ನಿಲ್ಲ
ಬಿಜಾಪುರ : ಮಕ್ಕಳ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ್ದ ಸಾಹಿತಿ ಸಿಸು ಸಂಗಮೇಶ ಅವರು ಮಂಗಳವಾರ ರಾತ್ರಿ 11-15ರಲ್ಲಿ ಹೃದಯಾಘಾತದಿಂದ ನಿಧನರಾದರು. ಕಡಿಮೆ ರಕ್ತದ ಒತ್ತಡದಿಂದ ನರಳುತ್ತಿದ್ದ ಅವರನ್ನು ಮಂಗಳವಾರ ಬಿಎಲ್ಡಿಇ ಆಸ್ಪತ್ರೆಗೆ ಸೇರಿಸಲಾಗಿತ್ತು.
ಮಕ್ಕಳ ಸಾಹಿತ್ಯ ರಚನೆ, ಸಂಪಾದನೆ, ಮುದ್ರಣ ಹಾಗೂ ಪ್ರಕಟಣೆಯ ಕ್ಷೇತ್ರದಲ್ಲಿ ಅರ್ಧ ಶತಮಾನಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ ಸಿಸು ಸಂಗಮೇಶ ಅವರಿಗೆ 73 ವರ್ಷ ವಯಸ್ಸಾಗಿತ್ತು. ಅವರಿಗೆ ಪತ್ನಿ, ಮೂವರು ಪುತ್ರಿಯರು ಹಾಗೂ ಇಬ್ಬರು ಪುತ್ರರು ಇದ್ದಾರೆ.
ಬಿಜಾಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಯರನಾಳದಲ್ಲಿ 1929ರಲ್ಲಿ ಜನಿಸಿದ ಸಂಗಮೇಶ ಸಿದ್ಧರಾಮಪ್ಪ ಮನಗೊಂಡ ಅವರು ಆಧುನಿಕ ಕನ್ನಡದ ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಸಿದ್ಧರಾಮ ಸುತ (ಸಿಸು) ಎಂಬ ಕಾವ್ಯನಾಮದಿಂದಲೇ ಖ್ಯಾತರಾಗಿದ್ದರು.
ಮೂರು ದಶಕಗಳ ಕಾಲ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ ಅವರು ಭಾರತೀಯ ಸಾಹಿತ್ಯ ಭಂಡಾರ ಪ್ರಕಾಶನ ಎಂಬ ಸಂಸ್ಥೆಯನ್ನೂ ಆರಂಭಿಸಿದ್ದರು. ಈ ಸಂಸ್ಥೆಯು ಸಿಸು ಸಂಗಮೇಶರ ಕೃತಿಗಳನ್ನಷ್ಟೇ ಅಲ್ಲದೆ ಇತರ ಶಿಕ್ಷಕರು ರಚಿಸಿದ ಸುಮಾರು 30ಕ್ಕೂ ಹೆಚ್ಚು ಪುಸ್ತಕಗಳನ್ನು ಮುದ್ರಿಸಿ, ಪ್ರಕಾಶಿಸಿದೆ.
ಬಾಲಭಾರತಿ ಪ್ರಕಾಶನದ ಮಕ್ಕಳ ವಿಭಾಗದಲ್ಲಿ 80ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿರುವ ಖ್ಯಾತಿ ಸಂಗಮೇಶರದು. ನರಿಯ ಫಜೀತಿ, ಮಂಕುಮರಿ, ಆಸೆಬುರುಕಿ ಆಶಾ, ದಾರಿಯ ಬುತ್ತಿ ಮೊದಲಾದ ಕೃತಿಗಳು ಇಂದಿಗೂ ಜನಪ್ರಿಯ. ನನ್ನ ಗೆಳೆಯ ಜಪಾನದ ಟಾರೋ, ನನ್ನ ಮನೆ ಕೃತಿಗಳಿಗೆ ರಾಷ್ಟ್ರಪ್ರಶಸ್ತಿ, ನನ್ನ ಗೆಳೆಯ ಎಸ್ಕಿಮೋ ಇಗ್ಲಿಯುಕ್ ಕೃತಿಗೆ ರಾಜ್ಯ ಸಾಹಿತ್ಯ ಅಕಾಡಮಿ ಪ್ರಶಸ್ತಿಯನ್ನು ಸಂಗಮೇಶರು ಪಡೆದಿದ್ದರು.
ಅಂತ್ಯಕ್ರಿಯೆ : ಬುಧವಾರ ಮಧ್ಯಾಹ್ನ ಬಬಲೇಶ್ವರ ನಾಕಾ ಬಳಿಯ ರುದ್ರಭೂಮಿಯಲ್ಲಿ ಸಿಸು ಸಂಗಮೇಶರ ಅಂತ್ಯಕ್ರಿಯೆ ನಡೆಯಿತು ಎಂದು ಅವರ ಹಿರಿಯ ಪುತ್ರ ಬಸವರಾಜ ಮನಗೊಂಡ ತಿಳಿಸಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications