ಮೆತ್ತಗಾದ ಮಮತಾ, ಎನ್ಡಿಎ ಜೊತೆಪುನರಪಿ ಕಲ್ಯಾಣ ಸನ್ನಿಹಿತ
ನವದೆಹಲಿ : ಪ್ರಧಾನಿ ವಾಜಪೇಯಿ ಹಾಗೂ ತೃಣಮೂಲ ಕಾಂಗ್ರೆಸ್ನ ಮಮತಾ ಬ್ಯಾನರ್ಜಿ ಯಾವುದೇ ಕ್ಷಣದಲ್ಲಿ ಭೇಟಿಯಾಗುವರೆಂದು ನಿರೀಕ್ಷಿಸಲಾಗಿದ್ದು , ಪ್ರಜಾಸತ್ತಾತ್ಮಕ ಒಕ್ಕೂಟವನ್ನು ಮಮತಾ ಬಣ ಕೂಡಿಕೊಳ್ಳುವ ಸಾಧ್ಯತೆಗಳು ಉಜ್ವಲವಾಗಿವೆ.
ವಾಜಪೇಯಿ ನೇತೃತ್ವದ ರಾಷ್ಟ್ರೀಯ ಪ್ರಜಾ ಸತ್ತಾತ್ಮಕ ಒಕ್ಕೂಟಕ್ಕೆ ತೃಣಮೂಲ ಕಾಂಗ್ರೆಸ್ ಸೇರ್ಪಡೆಗೊಳ್ಳುವ ಸಾಧ್ಯತೆಗಳನ್ನು ತಳ್ಳಿಹಾಕದಿರುವ ಮೂಲಕ, ಶೀಘ್ರವೇ ಎನ್ಡಿಎ ಹಾಗೂ ತೃಣಮೂಲ ಕಾಂಗ್ರೆಸ್ ಪುನರಪಿ ಕಲ್ಯಾಣದ ಇಂಗಿತವನ್ನು ಮಮತಾ ಬ್ಯಾನರ್ಜಿ ವ್ಯಕ್ತಪಡಿಸಿದ್ದಾರೆ.ಎನ್ಡಿಎಗೆ ತೃಣಮೂಲ ಸೇರ್ಪಡೆಗೊಳ್ಳುವ ವಿಷಯವನ್ನು ಪಕ್ಷವು ನಿಶ್ಚಯಿಸುತ್ತದೆ ಎಂದು ಪಶ್ಚಿಮ ಬಂಗಾಳ ಚುನಾವಣೆಯ ನಂತರ ಇದೇ ಮೊದಲ ಬಾರಿಗೆ ಮಮತಾ ಎನ್ಡಿಎ ಬಗೆಗೆ ಮೆದುವಾಗಿ ಮಾತನಾಡಿದ್ದಾರೆ.
ಇತ್ತೀಚಿನ ವಿಧಾನಸಭೆ ಚುನಾವಣೆಗಳಲ್ಲಿ ಸಂಭವಿಸಿರುವ ಭಾರೀ ಅಕ್ರಮ- ಅವ್ಯವಹಾರಗಳಿಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಆಗ್ರಹಿಸಲು ರಾಷ್ಟ್ರಪತಿ ಕೆ.ಆರ್. ನಾರಾಯಣನ್ ಅವರಿಗೆ ಮನವಿ ಪತ್ರ ಸಲ್ಲಿಸುವ ಮುನ್ನ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಎನ್ಡಿಎ ಸಖ್ಯದ ಬಗೆಗೆ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಅವರು, ಭವಿಷ್ಯದ ಬಗ್ಗೆ ತಿಳಿಸಲು ನಾನೇನೂ ಭವಿಷ್ಯಕಾರಳಲ್ಲ ಎಂದು ಕೆರಳಿ ನುಡಿದರು.
ಪ್ರಜಾ ಸತ್ತಾತ್ಮಕ ಒಕ್ಕೂಟಕ್ಕೆ ತೃಣಮೂಲ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಮತಾ ಆಂತರಿಕ ಒತ್ತಡಗಳನ್ನು ಎದುರಿಸುತ್ತಿದ್ದು , ಅವರು ಪಕ್ಷದ ಆಂತರಿಕ ಬಂಡಾಯವನ್ನು ಹತ್ತಿಕ್ಕಲಾದರೂ ವಾಜಪೇಯಿ ಸಖ್ಯ ಬಯಸುವುದು ಅನಿವಾರ್ಯವಾಗಿದೆ. ಆದರೆ, ಈ ನಡುವೆ ತೃಣಮೂಲ ಬಗೆಗೆ ಮೊದಲಿನ ಒಲವನ್ನು ಹೊಂದದಿರುವ ಬಿಜೆಪಿ , ಮಮತಾರನ್ನು ಸ್ವಾಗತಿಸಲು ಅಷ್ಟೇನೂ ಉತ್ಸುಕವಾಗಿಲ್ಲ ಎನ್ನುವುದು ಗಮನಾರ್ಹ.
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications