ರಾಜಧಾನಿಯಿಂದ ಬಂದರು ನಗರಿಗೆ ಆಯಿಲ್ ಪೈಪ್ಲೈನ್ ಸಂಪರ್ಕ
ಬೆಂಗಳೂರು : 1790 ಕೋಟಿ ರುಪಾಯಿಗಳ ವೆಚ್ಚದಲ್ಲಿ ಬೆಂಗಳೂರು ಮತ್ತು ಮಂಗಳೂರುಗಳ ನಡುವೆ ಆಯಿಲ್ ಪೈಪ್ಲೈನ್ ಅಳವಡಿಸುವ ಯೋಜನೆಯ ಒಪ್ಪಂದಕ್ಕೆ ಶುಕ್ರವಾರ ರಾಜ್ಯ ಸರ್ಕಾರ ಹಾಗೂ ಭಾರತ್ ಪೆಟ್ರೋಲಿಯಂ ಅಂಕಿತ ಹಾಕಿದವು. ಇದರೊಂದಿಗೆ ಬಹು ದಿನಗಳ ಮಹತ್ವಾಕಾಂಕ್ಷೆಯ ಯೋಜನೆ ಜೀವ ತುಂಬಿಕೊಂಡಿದೆ.
ಬೆಂಗಳೂರು- ಮಂಗಳೂರುಗಳ ನಡುವೆ ಅಳವಡಿಸುವ ಆಯಿಲ್ ಪೈಪ್ಲೈನ್ನಿಂದಾಗಿ ಪ್ರತಿದಿನ 2.5 ಮೆಟ್ರಿಕ್ ಟನ್ ತೈಲ ಸಾಗಾಣಿಕೆ ಸಾಧ್ಯವಾಗಲಿದೆ ಎಂದು ಕಾಮಗಾರಿಯ ಪ್ರಾಮುಖ್ಯತೆಯ ಬಗ್ಗೆ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ಕಾಮಗಾರಿ ಪೂರ್ಣಗೊಳ್ಳುವುದರಿಂದ ರಾಜಧಾನಿ ಹಾಗೂ ಬಂದರು ನಗರಿ ನಡುವಣ ಸಾರಿಗೆ ಸಂಪರ್ಕ ಮತ್ತಷ್ಟು ಸುಧಾರಿಸುವ ಕುರಿತು ಮುಖ್ಯಮಂತ್ರಿ ವಿಶ್ವಾಸ ವ್ಯಕ್ತಪಡಿಸಿದರು.
ಈ ಯೋಜನೆ ಎರಡೂ ನಗರಿಗಳ ಪ್ರಮುಖ ಸಂಪರ್ಕವಾಗಿದ್ದು , ಇದರ ಸಾಮರ್ಥ್ಯವನ್ನು ಮತ್ತಷ್ಟು ಉತ್ತಮಗೊಳಿಸಬೇಕಾಗಿದೆ ಎಂದು ಕೃಷ್ಣ ಹೇಳಿದರು. ಯೋಜನೆಗೆ ಸಂಬಂಧಿಸಿದಂತೆ ಭಾರತ್ ಪೆಟ್ರೋಲಿಯಂನ ಮುಖ್ಯಸ್ಥ ಎಚ್.ಪಿ. ಬಾಲನ್ರೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.
(ಇನ್ಫೋ ವಾರ್ತೆ)
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications