ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕಂಪ್ಯೂಟರ್ನಲ್ಲಿ ಕನ್ನಡ ಅಳವಡಿಸಲೊಂದು ಜಾಗೃತಿ ಶಿಬಿರ
ಬೆಂಗಳೂರು : ಕಂಪ್ಯೂಟರ್ನಲ್ಲಿ ಕನ್ನಡ ಅಳವಡಿಸುವ ಸಾಧ್ಯತೆಗಳ ಬಗ್ಗೆ ಜಾಗೃತಿ ಮೂಡಿಸಲೊಂದು ಶಿಬಿರ ಬೆಂಗಳೂರಿನಲ್ಲಿ ಜೂನ್ 16ರಂದು ನಡೆಯಲಿದೆ.
ವಿಶ್ವಾದ್ಯಂತ ಎಲ್ಲರೂ ಒಂದೇ ತಂತ್ರಾಂಶ ಬಳಸುವ ಮೂಲಕ ಕಂಪ್ಯೂಟರ್ನ ಕನ್ನಡ ಬಳಕೆಯಲ್ಲಿ ಏಕರೂಪತೆಯನ್ನು ತರುವ ಸಾಧ್ಯತೆಗಳ ಬಗ್ಗೆ ಚರ್ಚಿಸಲು ಜೂನ್ 16ರ ಬೆಳಗ್ಗೆ 10 ಗಂಟೆಗೆ ರವೀಂದ್ರ ಕಲಾಕ್ಷೇತ್ರದ ಪಕ್ಕದಲ್ಲಿರುವ ಕನ್ನಡ ಭವನದ ನಯನ ಸಭಾಂಗಣದಲ್ಲಿ ಈ ಶಿಬಿರ ಏರ್ಪಡಿಸಲಾಗಿದೆ.
ಕಂಪ್ಯೂಟರ್ನಲ್ಲಿ ಕನ್ನಡ ಅಳವಡಿಕೆಯ ಬಗ್ಗೆ ಮಾಹಿತಿ ನೀಡುವ ಈ ಶಿಬಿರದಲ್ಲಿ ಪಾಲ್ಗೊಳ್ಳ ಬಯಸುವವರು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳನ್ನು ಪತ್ರದ ಮೂಲಕ ಅಥವಾ ದೂರವಾಣಿ ಸಂಖ್ಯೆ 2092725, 2092239 ಮೂಲಕ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಮುಖಪುಟ / ಇವತ್ತು... ಈ ಹೊತ್ತು...
Comments
Story first published: Sunday, June 3, 2001, 5:30 [IST]