ಹೊಗೆ ಉಗುಳುವ ಸರ್ಕಾರಿ ಬಸ್ಸಿಗೆ ಜೂನ್ 5 ರಿಂದ ಕಡಿವಾಣ
ಬೆಂಗಳೂರು : ವಿಶ್ವ ಪರಿಸರ ದಿನವಾದ ಜೂನ್ 5 ರಿಂದ ರಾಜ್ಯದ ಕೆಎಸ್ಆರ್ಟಿಸಿ ಬಸ್ಗಳು ನಿಸರ್ಗಕ್ಕೆ ಇನ್ನಷ್ಟು ಹತ್ತಿರವಾಗಲಿವೆ. ಯಥೇಷ್ಟ ಹೊಗೆ ಉಗುಳುತ್ತಾ ಸಾಗುವ ಬಸ್ಗಳನ್ನೆಲ್ಲಾ ಹದ್ದು ಬಸ್ತಿನಲ್ಲಿಡುವ ಕಾರ್ಯ ಅಂದಿನಿಂದ ಕಟ್ಟು ನಿಟ್ಟಾಗಿ ಆರಂಭಿಸಲಿದೆ.
ಈ ವಿಷಯವನ್ನು ಸುದ್ದಿಗೋಷ್ಠಿಯಲ್ಲಿ ತಿಳಿಸಿದ ಸಾರಿಗೆ ಸಚಿವ ಸಗೀರ್ ಅಹ್ಮದ್ ಅವರು 12 ಸಾವಿರಕ್ಕೂ ಹೆಚ್ಚು ಕೆಎಸ್ಆರ್ ಟಿಸಿ ಬಸ್ಗಳನ್ನು ನೀಟಾಗಿ ಪರಿಶೀಲಿಸಿ, ಅನುಮತಿಯ ಗುರುತಿಗಾಗಿ ಅವುಗಳ ಮೇಲೆ ಸ್ಟಿಕ್ಕರ್ ಒಂದನ್ನು ಅಂಟಿಸಿದ ನಂತರವೇ ಬಸ್ ಸ್ಟ್ಯಾಂಡಿನಿಂದ ಹೊರಗೆ ಬಿಡಲಾಗುವುದು.
ಉಸಿರ ಕೊಲ್ಲುವ ಹೊಗೆಯನ್ನು ಕಡಿಮೆ ಮಾಡುವುದಕ್ಕೋಸ್ಕರ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಪ್ರಯಾಣಿಕರ ದೂರುಗಳಿಗೆ ಮೊದಲ ಆದ್ಯತೆ ಕೊಡಲಾಗುವುದು. ನಿಮ್ಮ ಯಾವುದೇ ದೂರುಗಳನ್ನು ಸಲಹಾ ಪೆಟ್ಟಿಗೆಯಲ್ಲಿ ಹಾಕಿದಲ್ಲಿ ಅದನ್ನು ಪರಿಶೀಲಿಸಲಾಗುವುದು. ಅಲ್ಲದೆ ದೂರ ಪ್ರಯಾಣದ ಮಾರ್ಗದಲ್ಲಿ ‘ಪಿ. ಸಿರೀಸ್ - 5000’ ದರ್ಜೆಯ ಬಸ್ಗಳನ್ನು ಹಾಕಲಾಗುವುದು. ಪ್ರಯಾಣಿಕರ ಸೀಟಿನ ಪಕ್ಕ ದಿನ ಪತ್ರಿಕೆ, ಕುಡಿಯುವ ನೀರಿನ ಬಾಟಲಿ ಮತ್ತು ಫ್ಯಾನು ಲೈಟ್ಗಳನ್ನು ಆಳವಡಿಸಲಾಗುವುದು ಎಂದು ಸಚಿವರು ವಿವರಿಸಿದರು.
ಕೆಎಸ್ಆರ್ಟಿಸಿ ಬಸ್ನಿಲ್ದಾಣದಲ್ಲಿ ಧಾಭಾ ಸ್ಥಾಪಿಸುವ ಮರು ನಿರ್ಧಾರ
ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮತ್ತು ಕೆಲವು ಪ್ರಮುಖ ತಾಲ್ಲೂಕು ಕೇಂದ್ರಗಳಲ್ಲಿ ಬಸ್ ನಿಲ್ದಾಣವನ್ನು ಉತ್ತಮ ದರ್ಜೆಗೇರಿಸುವ ಯೋಜನೆಯಿದ್ದು, ಗುಜರಾತಿನ ಕಂಪೆನಿಯಾಂದು ಈ ಗುತ್ತಿಗೆ ವಹಿಸಿಕೊಳ್ಳಲಿದೆ.
ಕೆಎಸ್ಆರ್ಟಿಸಿ ಬಸ್ ನಿಲ್ದಾಣಗಳಲ್ಲಿ ಧಾಭಾ ಅಥವಾ ಹೋಟೆಲ್ಗಳನ್ನು ನಿರ್ಮಿಸುವ ಕಾರ್ಯವನ್ನು ಈ ಬಾರಿ ಕೈಗೆತ್ತಿಕೊಳ್ಳಲಾಗುವುದು. ಆ ಪ್ರಕಾರ ಮಂಗಳೂರು, ಕೋಲಾರ, ಬಳ್ಳಾರಿ, ಮೈಸೂರು ಮತ್ತು ತುಮಕೂರುಗಳಲ್ಲಿ ಧಾಭಾ ತೆರೆಯಲಾಗುವುದು ಎಂದು ಹೇಳಿದ ಸಚಿವರು ಕಳೆದ ವರ್ಷದ ಯೋಜನೆಗಳನ್ನು ಈ ವರ್ಷವೂ ಪುನರುಚ್ಛರಿಸಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications