Get Updates
Get notified of breaking news, exclusive insights, and must-see stories!

ಪ್ರಶಸ್ತಿ ಸಂಖ್ಯೆ ಹೆಚ್ಚಿದರೆ, ಪ್ರಶಸ್ತಿ ಪಡೆವ ಹುಚ್ಚೂ ಹೆಚ್ಚತ್ತೆ : ಭಟ್‌

ಬೆಂಗಳೂರು : ಪ್ರಶಸ್ತಿಗಳ ಸಂಖ್ಯೆ ಹೆಚ್ಚಿದಂತೆಲ್ಲ ಅದನ್ನು ಪಡೆಯುವ ಹುಚ್ಚೂ ಸಮಾಜದಲ್ಲಿ ಹೆಚ್ಚುತ್ತದೆ ಎಂದು ಕವಿ ಪ್ರೊ. ಲಕ್ಷ್ಮೀನಾರಾಯಣ ಭಟ್‌ ಅಭಿಪ್ರಾಯಪಟ್ಟಿದ್ದಾರೆ. ಈ ಕಾರಣದಿಂದ ಪ್ರಶಸ್ತಿಗಳ ಸಂಖ್ಯೆ ಸೀಮಿತವಾಗಿರಬೇಕು ಎಂದೂ ಅವರು ಪ್ರತಿಪಾದಿಸಿದ್ದಾರೆ.

ಭಾನುವಾರ ಬೆಂಗಳೂರಿನಲ್ಲಿ ಡಿ.ವಿ.ಜಿ. ವೇದಿಕೆ ಏರ್ಪಡಿಸಿದ್ದ ಡಿ.ವಿ.ಜಿ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡುತ್ತಿದ್ದ ಅವರು, ಪ್ರಶಸ್ತಿಗಳನ್ನು ಕೇವಲ ವಯಸ್ಸಾದವರಿಗೆ ನೀಡದೆ, 40 -50ರ ವಯೋಮಾನದಲ್ಲಿರುವವರಿಗೆ ನೀಡಿದರೆ, ಅವರು ಇನ್ನೂ ಹೆಚ್ಚು ಕ್ರಿಯಾಶೀಲರಾಗಿ ಸೇವೆ ಸಲ್ಲಿಸಲು ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದರು.

ಆದರೆ, ಡಿ.ವಿ.ಜಿ. ಪ್ರಶಸ್ತಿ ಪ್ರದಾನ ಮಾಡಿದ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವೆ ರಾಣಿ ಸತೀಶ್‌ ಅವರು ಪ್ರಶಸ್ತಿಗಳು ಸಮಾಜಕ್ಕೆ ಚೇತನ ನೀಡುತ್ತವೆ ಆದ್ದರಿಂದ ಹೆಚ್ಚು ಹೆಚ್ಚು ಪ್ರಶಸ್ತಿಗಳನ್ನು ನೀಡಬೇಕು ಎಂದು ಹೇಳುವ ಮೂಲಕ ಭಟ್ಟರ ಅಭಿಪ್ರಾಯವನ್ನು ನಯವಾಗಿ ಅಲ್ಲಗಳೆದರು.

ಇದಕ್ಕೂ ಮುನ್ನ ಹಿರಿಯ ಚಿತ್ರನಟ- ನಿರ್ದೇಶಕ ಜಿ.ವಿ. ಅಯ್ಯರ್‌ ಉದ್ಘಾಟಿಸಿದ ಕಾರ್ಯಕ್ರಮದಲ್ಲಿ ಸಮಾಜ ಸೇವಕ ಹಾಗೂ ಲೇಖಕ ಕೋಟೇಶ್ವರ ಸೂರ್ಯನಾರಾಯಣ ರಾವ್‌ ಅವರಿಗೆ ಡಿ.ವಿ.ಜಿ. ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹಿರಿಯ ನ್ಯಾಯವಾದಿ ನಿಟ್ಟೂರು ಶ್ರೀನಿವಾಸರಾವ್‌ ಅಧ್ಯಕ್ಷತೆ ವಹಿಸಿದ್ದರು.

ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+