ಉಪ್ಪಾರಪೇಟೆ ಪೊಲೀಸರ ಸಾಹಸ : ಪಾರಾದ ಅಪಹೃತ ಬಾಲಕ
ಬೆಂಗಳೂರು: ವರ್ತಕನ ಮಗನನ್ನು ಅಪಹರಿಸಿದ ಅಪಹರಣಕಾರಣನನ್ನು ಸಿನಿಮೀಯ ರೀತಿಯಲ್ಲಿ ಬೆನ್ನತ್ತಿ ಗುಂಡು ಹಾರಿಸಿರುವ ನಗರದ ಉಪ್ಪಾರಪೇಟೆ ಪೊಲೀಸರು, ಮೂವರು ಅಪಹರಣಕಾರರನ್ನು ಬಂಧಿಸುವುದರೊಂದಿಗೆ ಅಪಹೃತ ವಿದ್ಯಾರ್ಥಿಯನ್ನು ಸುರಕ್ಷಿತವಾಗಿ ಪಾರು ಮಾಡಿದ್ದಾರೆ.
ಗಾಂಧಿನಗರದಲ್ಲಿ ಕಚೇರಿ ಹೊಂದಿರುವ ಶ್ರೀಮಂತ ಉದ್ಯಮಿ ಗುಲಾಬ್ಚಂದ್ ಪಗಾರಿಯಾ ಅವರ ಪುತ್ರ ಪ್ರಶಾಂತ ಪಗಾರಿಯಾ (16) ನನ್ನು ಭಾನುವಾರ ಅಪಹರಿಸಿದ್ದ ಅಪಹರಣಕಾರರು 10 ಲಕ್ಷ ರುಪಾಯಿಗಳ ಒತ್ತೆ ಹಣಕ್ಕೆ ಒತ್ತಾಯ ಸಲ್ಲಿಸಿದ್ದರು. ಅಪ್ಪನ ಕಚೇರಿಗೆ ಬಂದಿದ್ದ ಬಾಲಕನನ್ನು ವಾಪಸ್ಸು ಮನೆಗೆ ತೆರಳುವಾಗ ಅಪಹರಿಸಲಾಗಿತ್ತು .
ಅಪಹರಣಕಾರರು ಒತ್ತೆ ಹಣಕ್ಕೆ ಬೇಡಿಕೆ ಸಲ್ಲಿಸಿದಾಗ ಜಾಗೃತರಾದ ಗುಲಾಬ್ಚಂದ್ ಉಪ್ಪಾರಪೇಟೆ ಪೊಲೀಸರಿಗೆ ದೂರು ಸಲ್ಲಿಸಿದರು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ನಾಲ್ಕು ಪ್ರತ್ಯೇಕ ತಂಡ ರಚಿಸಿ ಮಂಡ್ಯ ಹಾಗೂ ಮೈಸೂರುಗಳಲ್ಲೂ ಕಾರ್ಯಾಚರಣೆ ಕೈಗೊಂಡರು. ಈ ಸಂದರ್ಭದಲ್ಲಿ ಬಾಲಕನ ಪೋಷಕರನ್ನು ಮತ್ತೆ ಸಂಪರ್ಕಿಸಿದ ಅಪಹರಣಕಾರರು ಹಣವನ್ನು ತೆಗೆದುಕೊಂಡು ಇಸ್ಕಾನ್ ದೇವಾಲಯದ ಬಳಿಗೆ ಬಾಲಕನ ತಾಯಿ ಏಕಾಂಗಿಯಾಗಿ ಬರುವಂತೆ ಸೂಚಿಸಿದರು. ಈ ಮಾಹಿತಿಯನ್ನಾಧರಿಸಿ ಪೊಲೀಸರು ಜಾಲ ರಚಿಸಿದರು.
ಮೊದಲಿಗೆ ತಮ್ಮಲ್ಲಿನ ಚೂರಿ, ಬಡಿಗೆ ಮುಂತಾದ ಆಯುಧಗಳಿಂದ ಅಪಹರಣಕಾರರು ಪ್ರತಿರೋಧ ತೋರಿಸಿದರೂ, ಪೊಲೀಸರು ಗುಂಡು ಹಾರಿಸಿದಾಗ ಮೆತ್ತಗಾಗಿದ್ದಾರೆ. ಕಾರ್ಯಾಚರಣೆಯಲ್ಲಿ ರಾಮಕೃಷ್ಣ , ಆರ್. ರಮೇಶ್ ಹಾಗೂ ಗೋಪಿ ಎನ್ನುವ ಮೂವರನ್ನು ಬಂಧಿಸಲಾಗಿದ್ದು , ಮತ್ತೊಬ್ಬ ಆರೋಪಿ ಶಿವ ತಲೆ ತಪ್ಪಿಸಿಕೊಂಡಿದ್ದಾನೆ.
ಪಶ್ಚಿಮ ವಿಭಾಗದ ಡಿಸಿಪಿ ಯು. ನಿಸಾರ್ ಅಹ್ಮದ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಚಿಕ್ಕಪೇಟೆ ಉಪ ವಿಭಾಗದ ಎಸಿಪಿ ಜಿ.ಎ. ಬಾವಾ, ಪೊಲೀಸ್ ಇನ್ಸ್ಪೆಕ್ಟರ್ ಹೆಚ್.ಜೆ. ಮರಿಸ್ವಾಮಿಗೌಡ, ನಗರ ಪೊಲೀಸ್ ಇನ್ಸ್ಪೆಕ್ಟರ್ಗಳಾದ ಎಸ್.ಕೆ. ಉಮೇಶ್, ವಾಲಿಬಾಷಾ, ಎಸ್.ರೇವಣ್ಣ , ಎಸ್.ವೈ. ಹಾದಿಮನಿ, ಪಿಎಸ್ಐ ಕೆ. ನಂಜುಂಡೇಗೌಡ, ಮುಖ್ಯ ಕಾನ್ಸ್ಟೇಬಲ್ಗಳಾದ ನಾಗರಾಜ್, ಲಕ್ಕಣ್ಣ, ಮುನಿರಾಜು, ಪುಟ್ಟಲಿಂಗಯ್ಯ ಹಾಗೂ ಕಾನ್ಸ್ಟೇಬಲ್ಗಳಾದ ಶಿವಕುಮಾರ್, ಶ್ರೀನಿವಾಸ್ ಮತ್ತು ಚಾಲಕರಾದ ರವಿ, ಹನುಮಯ್ಯ ಭಾಗವಹಿಸಿದ್ದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications