ಗುರುವಾರ ಪ್ರಧಾನಿ ಶಸ್ತ್ರಚಿಕಿತ್ಸೆಗೆಬ್ರೀಚ್ಕ್ಯಾಂಡಿ ಆಸ್ಪತ್ರೆ ಸಜ್ಜು
ಮುಂಬಯಿ : ಗುರುವಾರ (ಜೂನ್ 7) ನಡೆಯುವ ಪ್ರಧಾನಿ ವಾಜಪೇಯಿ ಅವರ ಬಲಮಂಡಿ ಶಸ್ತ್ರಚಿಕಿತ್ಸೆಗೆ ಬ್ರೀಚ್ಕ್ಯಾಂಡಿ ಆಸ್ಪತ್ರೆ ಸರ್ವ ಸಿದ್ಧತೆಗಳನ್ನೂ ಮಾಡಿಕೊಂಡಿದ್ದು , ಶಸ್ತ್ರಚಿಕಿತ್ಸೆಯ ನೇತೃತ್ವವನ್ನು ವಹಿಸುವ ಡಾ. ಚಿತ್ತರಂಜನ್ ರಣಾವತ್ ಮಂಗಳವಾರ ಮುಂಬಯಿಗೆ ಆಗಮಿಸುವ ನಿರೀಕ್ಷೆಯಿದೆ.
ಕಳೆದ ಅಕ್ಟೋಬರ್ನಲ್ಲಿ ಇದೇ ಆಸ್ಪತ್ರೆಯಲ್ಲಿ ನಡೆದ ಶಸ್ತ್ರಚಿಕಿತ್ಸೆಯಲ್ಲಿ ಪ್ರಧಾನಿಯವರ ಎಡ ಮಂಡಿ ಶಸ್ತ್ರಚಿಕಿತ್ಸೆಯನ್ನು ರಣಾವತ್ ಯಶಸ್ವಿಯಾಗಿ ನಡೆಸಿದ್ದರು. ಇತರ ತಜ್ಞರಾದ ಡಾ. ನಂದು, ಡಾ. ಹರೀಶ್ ಬೆಂಡೆ, ಎನ್ರಿಕೊ ಗಾಡ್ಜಿಲಾ ಹಾಗೂ ಸಿರೀಶ್ ಗುಪ್ತ ಅವರುಗಳು ರಣಾವತ್ ಅವರೊಂದಿಗಿನ ಶಸ್ತ್ರಚಿಕಿತ್ಸೆ ನಡೆಸುವ ವೈದ್ಯರುಗಳ ತಂಡದಲ್ಲಿದ್ದಾರೆ.
ಪ್ರಧಾನಿ ವಾಜಪೇಯಿ ಬುಧವಾರ ಮಧ್ಯಾಹ್ನ ಆಸ್ಪತ್ರೆಗೆ ದಾಖಲಾಗುವ ನಿರೀಕ್ಷೆಯಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಅವರು ಆಸ್ಪತ್ರೆಗೆ ದಾಖಲಾದ ತಕ್ಷಣದಿಂದಲೇ ಪೂರ್ವಭಾವಿ ಪರೀಕ್ಷೆಗಳನ್ನು ನಡೆಸಿ, ಆರೋಗ್ಯ ಪರಿಸ್ಥಿತಿಗೆ ಅನುಗುಣವಾಗಿ ಗುರುವಾರ ಅಥವಾ ಶುಕ್ರವಾರ ಶಸ್ತ್ರಚಿಕಿತ್ಸೆ ನಡೆಸಲಾಗುವುದು.
ಶಸ್ತ್ರಚಿಕಿತ್ಸೆಯಲ್ಲಿ ಹಾನಿಗೊಂಡಿರುವ ಮಂಡಿಯ ಭಾಗ ಹಾಗೂ ಕಾರ್ಟಿಲೇಜ್ ಡೆಬ್ರಿಸ್ಗಳನ್ನು ತೆಗೆಯಲಾಗುವುದು. ಟಿಬಿಯಾ ಹಾಗೂ ಫಿಮರ್ಗೆ ರಂಧ್ರಗಳನ್ನು ಕೊರೆಯುವ ಮೂಲಕ ಪ್ರಧಾನಿಯವರಿಗೆ ಕೃತಕ ಮಂಡಿಯನ್ನು ಅಳವಡಿಸಲಾಗುವುದು.
ಬ್ರೀಚ್ಕ್ಯಾಂಡಿ ಆಸ್ಪತ್ರೆಯ ಏಳನೇ ಮಹಡಿ ಪ್ರಧಾನಿಯವರ ಉಪಚಾರಕ್ಕೆ ಈಗಾಗಲೇ ಸಂಪೂರ್ಣ ಸಿದ್ಧವಾಗಿದೆ. ಪ್ರಧಾನಿಯವರ ಭದ್ರತಾ ಸಿಬ್ಬಂದಿ ಎಂದಿನಂತೆ ವಾಜಪೇಯಿಯವರ ಸುರಕ್ಷತೆಯ ಹೊಣೆ ಹೊರಲಿದ್ದು, ಭದ್ರತಾ ಸಿಬ್ಬಂದಿಯಾಂದಿಗೆ ಸಹಕಾರಕ್ಕಾಗಿ ಮುಂಬಯಿ ವಿಶೇಷ ಪೊಲೀಸ್ ಪಡೆಗಳು ಸಿದ್ಧವಾಗಿವೆ.
(ಐಎಎನ್ಎಸ್)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications