ನೇಪಾಳ : ಕರ್ಫ್ಯೂ ತೆರವು, ಪ್ರತಿಭಟನೆ ಕಾವಿಗೆ ತಂಪೆರೆದ ಮಳೆ
ಕಠ್ಮಂಡು : ಉದ್ರಿಕ್ತ ಪ್ರತಿಭಟನಕಾರರ ಕಾವಿಗೆ ಮಂಗಳವಾರ ಬೆಳಿಗ್ಗೆ ಸುರಿದ ಮಳೆ ತಂಪೆರೆದಿದ್ದು , ರಾಜಧಾನಿ ನಗರದಲ್ಲಿ ಹೇರಲಾಗಿದ್ದ ಕರ್ಫ್ಯೂವನ್ನು ವಾಪಸ್ಸು ಪಡೆಯಲಾಗಿದೆ. ಆದರೂ ನೇಪಾಳಿ ಪಡೆ ನಗರದ ವಿವಿಧ ಭಾಗಗಳಲ್ಲಿ ಪಥ ಸಂಚಲನೆ ನಡೆಸುವುದನ್ನು ಮುಂದುವರಿಸಿದೆ.
ಕರ್ಫ್ಯೂ ಕಾಲದಲ್ಲಿ ಕನಿಷ್ಠ ಆರು ಮಂದಿ ಜೀವ ಕಳೆದುಕೊಂಡಿದ್ದಾರೆ ಎಂದು ಕೆಲವು ವರದಿಗಳು ತಿಳಿಸಿವೆ. ಜನತೆ ಶಾಂತಿಯನ್ನು ಕಾಯ್ದುಕೊಳ್ಳಬೇಕೆಂದು ನೂತನ ದೊರೆ ಜ್ಞಾನೇಂದ್ರ ಮನವಿ ಮಾಡಿದ್ದಾರೆ. ಹತ್ಯೆ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು, ಮೂರು ದಿನಗಳಲ್ಲಿ ಜನತೆಗೆ ಸತ್ಯಾಂಶ ತಿಳಿಯಲಿದೆ ಎಂದು ಅವರು ಹೇಳಿದ್ದಾರೆ.
ಸೋಮವಾರ ಮೃತರಾದ ಎರಡು ದಿನಗಳ ದೊರೆ ಹಾಗೂ ರಾಜಕುಟುಂಬದ ಹತ್ಯೆಯ ಕೊಲೆಗಾರ ಎಂದು ನಂಬಲಾಗಿರುವ ದೀಪೇಂದ್ರ ಅವರ ಅಂತ್ಯಕ್ರಿಯೆ ಮಂಗಳವಾರ ಮಧ್ಯಾಹ್ನ ನಡೆಯಲಿದೆ. ಶುಕ್ರವಾರ ರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ರಾಜಕುಮಾರ ದೀಪೇಂದ್ರ ಗುಂಡೇಟಿನಿಂದ ತೀವ್ರ ಗಾಯಗೊಂಡು ಆಸ್ಪತ್ರೆ ಸೇರಿದ್ದರು. ಅವರನ್ನು ಉಳಿಸಲು ಮಿಲಿಟರಿ ಆಸ್ಪತ್ರೆಯ ವೈದ್ಯರು ಎರಡು ದಿನಗಳ ಕಾಲ ನಡೆಸಿದ ಎಲ್ಲ ಪ್ರಯತ್ನಗಳೂ ವಿಫಲವಾಗಿದ್ದವು.
ಈ ನಡುವೆ ರಾಜಕುಟುಂಬದ ಬರ್ಬರ ಹತ್ಯೆಯ ಪ್ರಕರಣದ ಕುರಿತು ಕೇಶವ ಪ್ರಸಾದ್ ಉಪಾಧ್ಯಾಯ ನೇತೃತ್ವದ ಮೂವರು ಸದಸ್ಯರ ನ್ಯಾಯಾಂಗ ಸಮಿತಿ ವಿಚಾರಣೆಯನ್ನು ಪ್ರಾರಂಭಿಸಿದೆ. ಸಮಿತಿ ತನ್ನ ವರದಿಯನ್ನು ನೀಡಲು ಮೂರು ದಿನಗಳ ಗಡುವನ್ನು ದೊರೆ ಗೊತ್ತುಪಡಿಸಿದ್ದಾರೆ. ಆದರೆ, ಗಡುವಿನೊಳಗೆ ವರದಿ ಸಲ್ಲಿಸುವುದು ತುಂಬಾ ಕಷ್ಟಕರ ಎಂದು ಸಮಿತಿಯ ಸದಸ್ಯರೊಬ್ಬರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications