Get Updates
Get notified of breaking news, exclusive insights, and must-see stories!

ಮತ್ತೆ ಶಾಂತಿಭಂಗ : ಕಠ್ಮಂಡುವಿನಲ್ಲಿ ಕರ್ಫ್ಯೂ ಮರು ಹೇರಿಕೆ

ಕಠ್ಮಂಡು : ಏಳು ಗಂಟೆಗಳ ಸಡಿಲಿಕೆಯ ನಂತರ, ಮಂಗಳವಾರ ಮಧ್ಯಾಹ್ನ ರಾಜಧಾನಿಯಲ್ಲಿ ಕರ್ಫ್ಯೂವನ್ನು ಮತ್ತೆ ಹೇರಲಾಗಿದೆ. ನಗರದಲ್ಲಿ ಉದ್ರಿಕ್ತ ಸ್ಥಿತಿ ಮುಂದುವರಿದಿದ್ದು, ಅರಮನೆ ಪ್ರದೇಶದಲ್ಲಿ ಕಲ್ಲು ತೂರಾಟ ನಡೆದಿರುವ ವರದಿಗಳು ಬಂದಿವೆ.

ಮಂಗಳವಾರ ಮಧ್ಯರಾತ್ರಿಯವರೆಗೂ ಕರ್ಫ್ಯೂ ಜಾರಿಯಲ್ಲಿರುತ್ತದೆ. ಜೀವಹಾನಿ- ಆಸ್ತಿಹಾನಿಯನ್ನು ತಡೆಗಟ್ಟಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಪಾಲಿಸುವ ದೃಷ್ಟಿಯಿಂದ ಮುಂಜಾಗರೂಕತಾ ಕ್ರಮವಾಗಿ ಕರ್ಫ್ಯೂ ಮರು ಹೇರಲಾಗಿದೆ ಎಂದು ಗೃಹ ಸಚಿವಾಲಯ ಪ್ರಕಟಣೆ ಹೊರಡಿಸಿದೆ.

ಸೋಮವಾರ ವಿಧಿಸಲಾಗಿದ್ದ ಕರ್ಫ್ಯೂವನ್ನು ಮಂಗಳವಾರ ಮುಂಜಾನೆ ಸಡಿಲಿಸಲಾಗಿತ್ತು . ಈ ಸಂದರ್ಭದಲ್ಲಿ ದುಷ್ಕರ್ಮಿಗಳು ಕಲ್ಲು ತೂರಾಟ, ರಸ್ತೆ ತಡೆ ಮುಂತಾದ ಶಾಂತಿ ಭಂಗ ಚಟುವಟಿಕೆಗಳಲ್ಲಿ ತೊಡಗಿದರು. ಇದರಿಂದಾಗಿ ಕರ್ಫ್ಯೂ ಮರು ಹೇರಿಕೆ ಅನಿವಾರ್ಯವಾಯಿತು ಎಂದು ಪ್ರಕಟಣೆ ತಿಳಿಸಿದೆ.

ಈ ನಡುವೆ ಕಠ್ಮಂಡುವಿನಲ್ಲಿ ಉದ್ರಿಕ್ತ ಪರಿಸ್ಥಿತಿ ಮುಂದುವರಿದಿದ್ದು , ರಜಾ ಕಾಲದ ಪ್ರವಾಸಕ್ಕಾಗಿ ಇಲ್ಲಿಗೆ ಬಂದಿರುವ ಪ್ರವಾಸಿಗರು ತೊಂದರೆಗೆ ಸಿಲುಕಿಕೊಂಡಿದ್ದಾರೆ. ನೇಪಾಳದಲ್ಲಿ ಸೃಷ್ಟಿಯಾದ ಹಠಾತ್‌ ಬೆಳವಣಿಗೆಯಿಂದಾಗಿ ಬಹುತೇಕ ಪ್ರವಾಸಿಗರು ತವರಿಗೆ ವಾಪಸ್ಸಾಗುವ ಪ್ರಯತ್ನದಲ್ಲಿದ್ದಾರೆ.

(ಇನ್ಫೋ ವಾರ್ತೆ)

ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+