ಮತ್ತೆ ಶಾಂತಿಭಂಗ : ಕಠ್ಮಂಡುವಿನಲ್ಲಿ ಕರ್ಫ್ಯೂ ಮರು ಹೇರಿಕೆ
ಕಠ್ಮಂಡು : ಏಳು ಗಂಟೆಗಳ ಸಡಿಲಿಕೆಯ ನಂತರ, ಮಂಗಳವಾರ ಮಧ್ಯಾಹ್ನ ರಾಜಧಾನಿಯಲ್ಲಿ ಕರ್ಫ್ಯೂವನ್ನು ಮತ್ತೆ ಹೇರಲಾಗಿದೆ. ನಗರದಲ್ಲಿ ಉದ್ರಿಕ್ತ ಸ್ಥಿತಿ ಮುಂದುವರಿದಿದ್ದು, ಅರಮನೆ ಪ್ರದೇಶದಲ್ಲಿ ಕಲ್ಲು ತೂರಾಟ ನಡೆದಿರುವ ವರದಿಗಳು ಬಂದಿವೆ.
ಮಂಗಳವಾರ ಮಧ್ಯರಾತ್ರಿಯವರೆಗೂ ಕರ್ಫ್ಯೂ ಜಾರಿಯಲ್ಲಿರುತ್ತದೆ. ಜೀವಹಾನಿ- ಆಸ್ತಿಹಾನಿಯನ್ನು ತಡೆಗಟ್ಟಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಪಾಲಿಸುವ ದೃಷ್ಟಿಯಿಂದ ಮುಂಜಾಗರೂಕತಾ ಕ್ರಮವಾಗಿ ಕರ್ಫ್ಯೂ ಮರು ಹೇರಲಾಗಿದೆ ಎಂದು ಗೃಹ ಸಚಿವಾಲಯ ಪ್ರಕಟಣೆ ಹೊರಡಿಸಿದೆ.
ಸೋಮವಾರ ವಿಧಿಸಲಾಗಿದ್ದ ಕರ್ಫ್ಯೂವನ್ನು ಮಂಗಳವಾರ ಮುಂಜಾನೆ ಸಡಿಲಿಸಲಾಗಿತ್ತು . ಈ ಸಂದರ್ಭದಲ್ಲಿ ದುಷ್ಕರ್ಮಿಗಳು ಕಲ್ಲು ತೂರಾಟ, ರಸ್ತೆ ತಡೆ ಮುಂತಾದ ಶಾಂತಿ ಭಂಗ ಚಟುವಟಿಕೆಗಳಲ್ಲಿ ತೊಡಗಿದರು. ಇದರಿಂದಾಗಿ ಕರ್ಫ್ಯೂ ಮರು ಹೇರಿಕೆ ಅನಿವಾರ್ಯವಾಯಿತು ಎಂದು ಪ್ರಕಟಣೆ ತಿಳಿಸಿದೆ.
ಈ ನಡುವೆ ಕಠ್ಮಂಡುವಿನಲ್ಲಿ ಉದ್ರಿಕ್ತ ಪರಿಸ್ಥಿತಿ ಮುಂದುವರಿದಿದ್ದು , ರಜಾ ಕಾಲದ ಪ್ರವಾಸಕ್ಕಾಗಿ ಇಲ್ಲಿಗೆ ಬಂದಿರುವ ಪ್ರವಾಸಿಗರು ತೊಂದರೆಗೆ ಸಿಲುಕಿಕೊಂಡಿದ್ದಾರೆ. ನೇಪಾಳದಲ್ಲಿ ಸೃಷ್ಟಿಯಾದ ಹಠಾತ್ ಬೆಳವಣಿಗೆಯಿಂದಾಗಿ ಬಹುತೇಕ ಪ್ರವಾಸಿಗರು ತವರಿಗೆ ವಾಪಸ್ಸಾಗುವ ಪ್ರಯತ್ನದಲ್ಲಿದ್ದಾರೆ.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications