ಬ್ಯಾಂಕ್ ನೌಕರನ ಅಡ್ಡಗಟ್ಟಿ 8.5 ಲಕ್ಷ ರುಪಾಯಿ ದರೋಡೆ
ಬೆಂಗಳೂರು : ಮಾರಕಾಸ್ತ್ರಗಳನ್ನು ಹೊಂದಿದ್ದ ನಾಲ್ವರು ದುಷ್ಕರ್ಮಿಗಳು ಇಂಡಿಯನ್ ಬ್ಯಾಂಕ್ ನೌಕರನಿಂದ 8.22 ಲಕ್ಷ ರುಪಾಯಿ ದೋಚಿರುವ ಘಟನೆ ಸೋಮವಾರ ಬೆಳಿಗ್ಗೆ ನಗರದ ಆರ್.ಎಂ.ಸಿ. ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರದೇಶದಲ್ಲಿ ಸಂಭವಿಸಿದೆ.
ಪೆಪ್ಸಿ ಕಂಪನಿಯಿಂದ ಸೋಮವಾರ ಬೆಳಗ್ಗೆ 8 ಲಕ್ಷ ರುಪಾಯಿಗೂ ಹೆಚ್ಚು ಹಣವನ್ನು ಸಂಗ್ರಹಿಸಿಕೊಂಡು ಅಂಬಾಸಡರ್ ಕಾರಿನಲ್ಲಿ ಬ್ಯಾಂಕಿಗೆ ವಾಪಸ್ಸಾಗುತ್ತಿದ್ದ ಇಂಡಿಯನ್ ಬ್ಯಾಂಕ್ನ ಗುಮಾಸ್ತ ಸತ್ಯನಾರಾಯಣ ಎನ್ನುವವರನ್ನು ನೀಲಿ ಮಾರುತಿಯಲ್ಲಿ ಬಂದ ದುಷ್ಕರ್ಮಿಗಳು ಅಡ್ಡಗಟ್ಟಿ ಹಣ ದೋಚಿದ್ದಾರೆ.
ಚಾಕು, ಕತ್ತಿ, ರಿವಾಲ್ವರ್ಗಳನ್ನು ದುಷ್ಕರ್ಮಿಗಳು ಹೊಂದಿದ್ದರು. 25 ರಿಂದ 30 ರ ವಯೋಮಾನದ ದರೋಡೆಕೋರರ ಪೈಕಿ ಚಾಲಕ ಗಡ್ಡಧಾರಿಯಾಗಿದ್ದ ಎಂದು ಪೊಲೀಸರಿಗೆ ದೂರು ನೀಡಿರುವ ಸತ್ಯನಾರಾಯಣ ತಿಳಿಸಿದ್ದಾರೆ. ಡಿಸಿಪಿ ಎಸ್.ಕೆ. ವೇಣುಗೋಪಾಲ್, ಎಸಿಪಿ ಪಾಂಡುರಂಗರಾವ್ ಸ್ಥಳ ಪರಿಶೀಲನೆ ನಡೆಸಿದ್ದು , ತನಿಖೆ ಮುಂದುವರಿದಿದೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications