ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ತುಮಕೂರು ಬಳಿ ಅಪಘಾತ ಮೂವರ ಸಾವು, 18 ಜನರಿಗೆ ಗಾಯ
ತುಮಕೂರು : ಕಳ್ಳಂಬೆಳ್ಳ ಸಮೀಪದ ಬಾಳೇನಹಳ್ಳಿ ಗೇಟ್ ಬಳಿ ಮಂಗಳವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಇತರ 18 ಮಂದಿ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಒಬ್ಬರನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ.
ಶಿರಾ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ಗೆ ಎದುರಿನಿಂದ ಬರುತ್ತಿದ್ದ ಲಾರಿಯಾಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಈ ಅಪಘಾತ ಸಂಭವಿಸಿತು. ಎರಡೂ ವಾಹನಗಳಿಗೆ ಭಾರಿ ಜಖಂ ಆಗಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಜೂನಿಯರ್ ಎಂಜಿನಿಯರ್ ಹನುಮಂತ ಹಾಗೂ ಶಫಿ ಎಂದು ಗುರುತಿಸಲಾಗಿದ್ದು, ಸಾವನ್ನಪ್ಪಿರುವ ಮಹಿಳೆ ಯಾರೆಂದು ತಿಳಿದುಬಂದಿಲ್ಲ.
12 ಪುರುಷರು, ನಾಲ್ವರು ಮಹಿಳೆಯರು ಹಾಗೂ ಎರಡು ಮಕ್ಕಳು ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಳ್ಳಂಬೆಳ್ಳ ಹಾಗೂ ತುಮಕೂರಿನ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಲಾಗಿದೆ. ಕಳ್ಳಂಬೆಳ್ಳ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
Comments
Story first published: Wednesday, June 6, 2001, 5:30 [IST]